alex Certify ‘ಮದುವೆ’ ಮುರಿದು ಬಿದ್ದಿದ್ದಕ್ಕೆ ಮನನೊಂದ ಯುವಕ ಸಾವಿಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮದುವೆ’ ಮುರಿದು ಬಿದ್ದಿದ್ದಕ್ಕೆ ಮನನೊಂದ ಯುವಕ ಸಾವಿಗೆ ಶರಣು

ನಿಶ್ಚಿತಾರ್ಥವಾಗಿದ್ದ ಮದುವೆ ಮುರಿದು ಬಿದ್ದಿದ್ದಕ್ಕೆ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.

ಶಿಕಾರಿಪುರ ತಾಲೂಕಿನ ಮಾಸೂರಿನ 26 ವರ್ಷದ ಅಣ್ಣಪ್ಪ ಮೃತಪಟ್ಟ ಯುವಕನಾಗಿದ್ದು, ಈತನ ವಿವಾಹ ವರ್ಷದ ಹಿಂದೆ ಇದೇ ತಾಲೂಕಿನ ಯುವತಿಯೊಂದಿಗೆ ನಿಶ್ಚಯವಾಗಿತ್ತು ಎನ್ನಲಾಗಿದೆ.

ಆದರೆ ಕೊನೆ ಕ್ಷಣದಲ್ಲಿ ಯುವತಿಯ ತಂದೆ ಈ ಮದುವೆ ಮಾಡಿಕೊಡಲು ನಿರಾಕರಿಸಿದ್ದು, ಇದರಿಂದ ಮನನೊಂದ ಅಣ್ಣಪ್ಪ ಮೇ 10ರಂದು ವಿಷ ಸೇವಿಸಿದ್ದರು. ಇವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...