alex Certify ಮದ್ಯದ ಅಮಲಿನಲ್ಲಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ – ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದ ಅಮಲಿನಲ್ಲಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ – ಇಬ್ಬರ ದುರ್ಮರಣ

ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿನ ಪಿಇಎಸ್ ಕಾಲೇಜಿನ ಹತ್ತಿರ ನಡೆದಿದ್ದು, ಮದ್ಯದ ಅಮಲಿನಲ್ಲಿದ್ದ ಬೈಕ್ ಸವಾರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ತಲೆಗೆ ಜೋರಾಗಿ ಪೆಟ್ಟಾಗಿದೆ. ಇದನ್ನು ಸ್ಥಳೀಯರು ಕಂಡು ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಲಕ್ಷ್ಮೀಶ(32) ಮತ್ತು ರಾಘವೇಂದ್ರ(26) ಸಾವನ್ನಪ್ಪಿದವರು. ಇಬ್ಬರೂ ಸ್ನೇಹಿತರಾಗಿದ್ದು, ರಾತ್ರಿ ವೇಳೆ ಪಾರ್ಟಿ ಮುಗಿಸಿಕೊಂಡು ನಾಲ್ವರು ಹೊರಟಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನೊಂದು ಬೈಕ್ ನಲ್ಲಿ ಇವರ ಸ್ನೇಹಿತರಾದ ರಕ್ಷಿತ್ ಹಾಗೂ ಗೌತಮ್ ಇದ್ದರು.

ಲಕ್ಷ್ಮೀಶ ಹಾಗೂ ರಾಘವೇಂದ್ರ ಮದ್ಯದ ಅಮಲಿನಲ್ಲಿ ಹೆಲ್ಮೆಟ್ ಹಾಕದೆ, ಜೋರಾಗಿ ವಾಹನವನ್ನು ಚಲಾಯಿಸಿದ್ದಾರೆ. ಹೀಗಾಗಿಯೇ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...