alex Certify ಮನೆಯಲ್ಲಿಯೇ ನೇಣಿಗೆ ಕೊರಳೊಡ್ದಿದ ಡಾ. ಸೌಂದರ್ಯ; ಮಾಜಿ ಸಿಎಂ ಮೊಮ್ಮಗಳ ಆತ್ಮಹತ್ಯೆಯಿಂದ ಕುಟುಂಬಕ್ಕೆ ಆಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿಯೇ ನೇಣಿಗೆ ಕೊರಳೊಡ್ದಿದ ಡಾ. ಸೌಂದರ್ಯ; ಮಾಜಿ ಸಿಎಂ ಮೊಮ್ಮಗಳ ಆತ್ಮಹತ್ಯೆಯಿಂದ ಕುಟುಂಬಕ್ಕೆ ಆಘಾತ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆಗೆ ಶರಣಾಗಿರುವುದು ಮಾಜಿ ಮುಖ್ಯಮಂತ್ರಿ ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ.

ಬೆಂಗಳೂರಿನ ವಸಂತನಗರದ ಫ್ಲ್ಯಾಟ್ ನಲ್ಲಿ ತಮ್ಮ ಮನೆಯ ರೂಮಿನಲ್ಲಿಯೇ ಸೌಂದರ್ಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 2018ರಲ್ಲಿ ಡಾ. ನೀರಜ್ ಜತೆ ವಿವಾಹವಾಗಿದ್ದ ಸೌಂದರ್ಯ ಅವರಿಗೆ ಪುಟ್ಟ ಮಗು ಕೂಡ ಇತ್ತು. ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು.

ಇಂದು ಬೇಳಿಗ್ಗೆ 8 ಗಂಟೆಗೆ ಪತಿ ಡಾ. ನೀರಜ್ ಕೆಲಸಕ್ಕೆ ತೆರಳಿದ್ದರು. ಬೆಳಿಗ್ಗೆ 10 ಗಂಟೆಯಾದರೂ ಸೌಂದರ್ಯ ರೂಮಿನ ಬಾಗಿಲು ಬಡಿದರೂ ತೆರೆಯದಿದ್ದಾಗ ಮನೆ ಕೆಲಸದವರು ಪತಿ ನೀರಜ್ ಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಾಗಲೇ ಸೌಂದರ್ಯ ನೇಣಿಗೆ ಶರಣಾಗಿದ್ದರು ಎನ್ನಲಾಗಿದೆ.

ಕೆಲ ಮೂಲಗಳ ಪ್ರಕಾರ ಕೌಟುಂಬಿಕ ಕಲಹದಿಂದ ನೊಂದು ಸೌಂದರ್ಯ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗುತ್ತಿದೆ. ಆದರೆ ಮಾಜಿ ಸಿಎಂ ಮೊಮ್ಮಗಳು, ವೃತ್ತಿಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ದಿಢೀರ್ ಆತ್ಮಹತ್ಯೆಗೆ ಶರಣಾಗಿರುವುದು ಆಘಾತದ ಜತೆಗೆ ಅಚ್ಚರಿಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...