alex Certify ಮನೆಯಲ್ಲಿ ಶವವಿದ್ದರೂ ‘ಧ್ವಜಾರೋಹಣ’ ನೆರವೇರಿಸಿ ರಾಷ್ಟ್ರ ಪ್ರೇಮ ಮೆರೆದ ಕುಟುಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಶವವಿದ್ದರೂ ‘ಧ್ವಜಾರೋಹಣ’ ನೆರವೇರಿಸಿ ರಾಷ್ಟ್ರ ಪ್ರೇಮ ಮೆರೆದ ಕುಟುಂಬ

ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇಶವಾಸಿಗಳು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದಾರೆ. ಮೂರು ದಿನಗಳ ಕಾಲ ಈ ಅಭಿಯಾನ ನಡೆಯುತ್ತಿದ್ದು, ಇದರ ಮಧ್ಯೆ ಕುಟುಂಬವೊಂದು ತಮ್ಮ ಮನೆಯಲ್ಲಿ ಶವವಿದ್ದರೂ ಧ್ವಜಾರೋಹಣ ನೆರವೇರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆದಿದೆ.

ಹೌದು, ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರಂನ ಅಶೋಕ ರಸ್ತೆ ನಿವಾಸಿ ಬಿ.ಆರ್. ರಂಗನಾಥ್ ಮತ್ತು ಕುಟುಂಬಸ್ಥರು ಧ್ವಜಾರೋಹಣ ನೆರವೇರಿಸಲು ಶುಕ್ರವಾರ ಸಂಜೆ ಸಿದ್ಧತೆ ನಡೆಸಿದ್ದರು. ಆದರೆ ಬೆಳಗ್ಗೆ ರಂಗನಾಥ ಅವರ ತಾಯಿ ರಾಧಮ್ಮ ವಿಧಿವಶರಾಗಿದ್ದಾರೆ.

ಇದರಿಂದ ಕುಟುಂಬಸ್ಥರು ದುಃಖದ ಮಡುವಿನಲ್ಲಿ ಮುಳುಗಿದ್ದು, ಇದರ ಮಧ್ಯೆಯೂ ತಮ್ಮ ಕರ್ತವ್ಯ ಮರೆತಿಲ್ಲ. ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಅವರುಗಳು ಧ್ವಜಾರೋಹಣ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಹಾಗೂ ಬಂಧುಗಳು ಎದ್ದು ನಿಂತು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...