alex Certify ಮನೆ ಬಾಡಿಗೆಗಾಗಿ ಮಾಲೀಕನ ಕಿರುಕುಳ, ಮನನೊಂದು ಬಿಜೆಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಬಾಡಿಗೆಗಾಗಿ ಮಾಲೀಕನ ಕಿರುಕುಳ, ಮನನೊಂದು ಬಿಜೆಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಬಿಜೆಪಿ ಕಚೇರಿ ಎದುರು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮನೆ ಬಾಡಿಗೆ ವಿಚಾರದಲ್ಲಿ ಮಾಲೀಕನ ಜೊತೆಗಿನ ಜಟಾಪಟಿಯಿಂದ ಮನನೊಂದು, ಬಿಜೆಪಿ ಕಚೇರಿ ಎದುರಲ್ಲೇ ಮೈಗೆ ಬೆಂಕಿ ಹಚ್ಚಿಕೊಂಡಿದ್ದಾನೆ.

ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. 50 ವರ್ಷದ ಬಲರಾಮ್ ತಿವಾರಿ ಎಂಬ ವ್ಯಕ್ತಿ ಬಿಜೆಪಿ ಕಚೇರಿ ಪ್ರವೇಶಿಸಿ ತನ್ನ ಮೈಗೆ ಬೆಂಕಿ ಹಚ್ಚಿಕೊಂಡಿದ್ದಾನೆ. ಆದರೆ ಒಳಬರುವ ಮುನ್ನವೇ ಕಚೇರಿಯ ಬಾಗಿಲಲ್ಲಿ ಕುಳಿತಿದ್ದ ಭದ್ರತಾ ಸಿಬ್ಬಂದಿ ಆತನನ್ನು ತಡೆದಿದ್ದಾರೆ. ಆತನ ದೇಹ ಸುಮಾರು ಶೇ.40-45ರಷ್ಟು ಸುಟ್ಟು ಹೋಗಿದ್ದು, ಪೊಲೀಸರು ಶ್ಯಾಮ ಪ್ರಸಾದ್ ಮುಖರ್ಜಿ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಲರಾಮ್‌ ತಿವಾರಿ ಠಾಕೂರ್‌ಗಂಜ್ ಪ್ರದೇಶದಲ್ಲಿರುವ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾನೆ. 6 ತಿಂಗಳ ಹಿಂದೆ ಬಲರಾಮ್ ತಿವಾರಿ ಕೆಲಸ ಕಳೆದುಕೊಂಡಿದ್ದ. ಇದರಿಂದಾಗಿ ಕುಟುಂಬದ ಆರ್ಥಿಕ ಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು. ಮನೆ ಬಾಡಿಗೆ ಕಟ್ಟಲು ಆತನ ಬಳಿ ಹಣವಿರಲಿಲ್ಲ. ಆದ್ರೆ ಮನೆ ಮಾಲೀಕ ಬಾಡಿಗೆ ಕೊಡುವಂತೆ ಪೀಡಿಸುತ್ತಿದ್ದ. ತಿವಾರಿ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ತಿವಾರಿ ಪೊಲೀಸರಿಗೆ ದೂರು ನೀಡಿದ್ರೂ ಪ್ರಯೋಜನವಾಗಿರಲಿಲ್ಲ. ಮನನೊಂದ ಆತ ಬಿಜೆಪಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...