alex Certify ಮಳವಳ್ಳಿ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಬಳಿಕ ಸ್ಥಳಕ್ಕೆ ಬಾರದ ಸಂಸದೆ ಸುಮಲತಾ ವಿರುದ್ಧ ಸಾರ್ವಜನಿಕರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳವಳ್ಳಿ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಬಳಿಕ ಸ್ಥಳಕ್ಕೆ ಬಾರದ ಸಂಸದೆ ಸುಮಲತಾ ವಿರುದ್ಧ ಸಾರ್ವಜನಿಕರ ಆಕ್ರೋಶ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಟ್ಯೂಷನ್ ಗೆ ಬರುತ್ತಿದ್ದ ಹತ್ತು ವರ್ಷದ ಪುಟ್ಟ ಬಾಲಕಿಯನ್ನು ಸುಳ್ಳು ನೆಪ ಹೇಳಿ ಕರೆಯಿಸಿಕೊಂಡ ವಿಕೃತಕಾಮಿಯೊಬ್ಬ ಆಕೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದಾನೆ.

ಈ ಘಟನೆ ಮಂಡ್ಯ ಜಿಲ್ಲೆ ಮಾತ್ರವಲ್ಲದೆ ಕರ್ನಾಟಕದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗೆ ತಕ್ಕ ಶಿಕ್ಷೆ ವಿಧಿಸಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಇದರ ಮಧ್ಯೆ ಘಟನೆ ನಡೆದು ಮೂರು ದಿನಗಳಾದರೂ ಸಹ ಮಂಡ್ಯ ಸಂಸದೆ ಸುಮಲತಾ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಸಾರ್ವಜನಿಕರನ್ನು ಕೆರಳಿಸಿದೆ.

ಹೀಗಾಗಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಹೇಳಿದ್ದ ‘ನಾನು ಮಳವಳ್ಳಿ ಹುಚ್ಚೇಗೌಡರ ಸೊಸೆ’ ಎಂಬ ಮಾತುಗಳನ್ನು ಇಟ್ಟುಕೊಂಡು ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ. ಘಟನೆ ನಡೆದು ಮೂರು ದಿನಗಳಾದರೂ ನೊಂದ ಬಾಲಕಿಯ ಕುಟುಂಬಕ್ಕೆ ಸಾಂತ್ವನ ಹೇಳದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...