alex Certify ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಖುಷಿ ಸುದ್ದಿ

ದೆಹಲಿ: ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಮಳೆಯಾಶ್ರಿತ ಕೃಷಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಕೃಷಿ ಕ್ಷೇತ್ರದಲ್ಲಿ ಬಂಪರ್ ಉತ್ಪಾದನೆ ನಿರೀಕ್ಷೆ ಇದೆ.

ಮುಂಗಾರು ಆಗಮನ ಜೂನ್ ನಿಂದ ಸೆಪ್ಟೆಂಬರ್ ವರೆಗೆ ಸರಾಸರಿ ಮಳೆಯ ದೀರ್ಘಾವಧಿ ಸರಾಸರಿಯ ಶೇಕಡ 103 ರಷ್ಟು ಮಳೆಯಾಗಲಿದೆ.
ದೇಶದ ಹೆಚ್ಚಿನ ರೈತರು ಮಳೆಯನ್ನೇ ನೆಚ್ಚಿಕೊಂಡಿದ್ದಾರೆ. ಈ ವರ್ಷ ಉತ್ತಮ ಮುಂಗಾರು ಮುನ್ಸೂಚನೆ ನೀಡಿರುವುದರಿಂದ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಕೇರಳ ಪ್ರವೇಶಿಸಿದ ಮುಂಗಾರು ನಂತರದ ದಿನಗಳಲ್ಲಿ ಇಡೀ ದೇಶವನ್ನು ಆವರಿಸಿಕೊಳ್ಳಲಿದೆ. ಬಿತ್ತನೆ ಕಾರ್ಯ ಚುರುಕುಗೊಳ್ಳಲಿದೆ. ಮುಂಗಾರು ಮಾರುತಗಳ ಚಲನೆ, ಪೂರಕ ವಾತಾವರಣ ಗಮನಿಸಿದಾಗ ಈ ವರ್ಷ ದೀರ್ಘಾವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮಹಪಾತ್ರ ತಿಳಿಸಿದ್ದಾರೆ.

ಕೇರಳದಲ್ಲಿ ಮಾನ್ಸೂನ್ ಪರಿಣಾಮ ರಾಜ್ಯದಲ್ಲಿಯೂ ಜೂನ್ 1 ರಿಂದ 5 ರವರೆಗೆ ವ್ಯಾಪಕ ಮಳೆಯಾಗಲಿದೆ. ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಇನ್ನಷ್ಟು ಭಾಗಗಳಿಗೆ ವಿಸ್ತರಣೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kaip išsaugoti miltelius ir palaikyti švarią aplinką: kodėl verta Top 10 maisto produktų, kurie padeda Kenksmingos plaukų dažų sudėties pagrindinė 6 paprasti būdai, kaip išspręsti užsikimšusį klozetą per Kaip tinkamai dozuoti druską: patarimai dėl druskos kiekio ir Pagrindiniai žiedinių kopūstų privalumai: neįtikėtinos naudos