alex Certify ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

ಮಂಡ್ಯ: ಮಹಿಳೆಯೊಬ್ಬರ ಮನೆಗೆ ನುಗ್ಗಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ.

45 ವರ್ಷದ ಪುಷ್ಪಲತಾ ಕೊಲೆಯಾದ ಮಹಿಳೆ. ಪುಷ್ಪಲತಾ ಪತಿ 10 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಪುಷ್ಪಲತಾ ಒಂಟಿಯಾಗಿ ಕಿಕ್ಕೇರಿ ಗ್ರಾಮದಲ್ಲಿ ವಾಸವಾಗಿದ್ದರು.

ಮೆಡಿಕಲ್ ಸ್ಟೋರ್ ನಡೆಸುತ್ತಿದ್ದ ಪುಷ್ಪಲತಾ, ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಿದ್ದಾರೆ. ಈ ವೇಳೆ ಏಕಾಏಕಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಪುಷ್ಪಲತಾ ಅವರನ್ನು ಭೀಕರವಾಗಿ ಕೊಲೆಗೈದಿದ್ದಾರೆ. ತಲೆ ಹಾಗೂ ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದು ಕೊಲ್ಲಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಕಿಕ್ಕೇರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...