alex Certify ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಬೊಮ್ಮಾಯಿ; ಜನತಾ ಪರಿವಾರದ ನೆನಪು ಮೆಲುಕು ಹಾಕಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಬೊಮ್ಮಾಯಿ; ಜನತಾ ಪರಿವಾರದ ನೆನಪು ಮೆಲುಕು ಹಾಕಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಕಾಲಿಗೆ ನಮಸ್ಕರಿಸಿ ಆಶಿರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಸಿಎಂಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು.

ದೇವೇಗೌಡರ ಭೇಟಿ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಜನತಾಪರಿವಾದಲ್ಲಿದ್ದಾಗಿನ ಒಡನಾಟ, ಹಳೆ ನೆನಪುಗಳನ್ನು ಮೆಲುಕು ಹಾಕಿದೆವು. ಸಿಕ್ಕಿರುವ ಅವಕಾಶ ಸಮರ್ಥವಾಗಿ ಬಳಸಿಕೊಂಡು, ರಾಜ್ಯಕ್ಕೆ ಉತ್ತಮವಾಗಿ ಆಡಳಿತ ನೀಡುವಂತೆ ಮಾರ್ಗದರ್ಶನ ನೀಡಿದರು ಎಂದು ಹೇಳಿದರು. ಸಿಎಂ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...