alex Certify ಮಾಜಿ ಸಚಿವರ ಪುತ್ರನ ಆತ್ಮಹತ್ಯೆ;‌ ಆರು ಮಂದಿ ಆರೋಪಿಗಳು ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವರ ಪುತ್ರನ ಆತ್ಮಹತ್ಯೆ;‌ ಆರು ಮಂದಿ ಆರೋಪಿಗಳು ಅರೆಸ್ಟ್..!

ಹರಿಯಾಣ: ಹರಿಯಾಣದ ಮಾಜಿ ಸಚಿವ ಮಂಗೇರಾಮ್ ರಾಠಿ ಅವರ ಪುತ್ರ ಜಗದೀಶ್ ರಾಠಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 55 ವರ್ಷದ ಜಗದೀಶ್ ರಾಠಿ ಮೃತ ದುರ್ದೈವಿ. ಬುಧವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಈ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಐಎನ್‌ಎಲ್‌ಡಿ ರಾಜ್ಯ ಮುಖ್ಯಸ್ಥ ನಫೆ ಸಿಂಗ್ ರಾಠಿ ಸೇರಿದಂತೆ ಆರು ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಾನಸಿಕವಾಗಿ ಕುಗ್ಗಿಸುವ ಕೆಲಸ ಆಗಿದೆ. ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಡಿಯಲ್ಲಿ ಈ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಜ್ಜರ್‌ನ ಪೊಲೀಸ್ ವರಿಷ್ಠಾಧಿಕಾರಿ ವಸೀಮ್ ಅಕ್ರಂ ಹೇಳಿದ್ದಾರೆ.

ಈ ಹಿಂದೆ ಜಗದೀಶ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು. ಡಿಸೆಂಬರ್ 26 ರಂದು ಜಗದೀಶ್ ಆಡಿಯೋ ಕ್ಲಿಪ್ ಅನ್ನು ಪ್ರಸಾರ ಮಾಡಲಾಗಿತ್ತು. ಕೆಲವು ಜನ ಆಸ್ತಿ ವಿಚಾರದಲ್ಲಿ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲ ನನಗೆ ಏನಾದರೂ ಆದರೆ ಅದಕ್ಕೆ ನೇರ ಹೊಣೆ ಇವರೇ ಎಂದು ಅವರು ಹೇಳಿದ್ದರು. ಈ ಬೆನ್ನಲ್ಲೇ ಕೆಲವರು ಜಗದೀಶ್‌ಗೆ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ ಎಂದು ಜಗದೀಶ್ ಕುಟುಂಬದವರು ಆರೋಪಿಸಿದ್ದಾರೆ. ಇದರಿಂದಾಗಿ ಜಗದೀಶ್ ತೀವ್ರ ಒತ್ತಡಕ್ಕೆ ಒಳಗಾಗಿದ್ದರಂತೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...