alex Certify ಮಾಜಿ ಸ್ಪೀಕರ್ ರಮೇಶ್ ಕುಮಾರ್ ಓರ್ವ ರಿಂಗ್ ಮಾಸ್ಟರ್; ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ; ‘ಕೈ’ ನಾಯಕರ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಓರ್ವ ರಿಂಗ್ ಮಾಸ್ಟರ್; ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ; ‘ಕೈ’ ನಾಯಕರ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

ಚಿಕ್ಕಬಳ್ಳಾಪುರ: ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಅಧ್ಯಕ್ಷ ಗೋಪಾಲಗೌಡ ಕೇವಲ ಹೆಸರಿಗೆ ಮಾತ್ರ, ಬ್ಯಾಂಕ್ ನಲ್ಲಿ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರದ್ದೇ ದರ್ಬಾರ್ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಚಿವರು, ರಮೇಶ್ ಕುಮಾರ್ ಓರ್ವ ರಿಂಗ್ ಮಾಸ್ಟರ್, ಬ್ಯಾಂಕ್ ನಲ್ಲಿ ನಡೆದ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ತನಿಖೆ ನಡೆದರೆ ರಮೇಶ್ ಕುಮಾರ್ ಸೇರಿದಂತೆ ಆಡಳಿತ ಮಂಡಳಿಯ ಕೆಲವರು ಜೈಲಿಗೆ ಹೋಗುತ್ತಾರೆ. ಹೀಗಾಗಿ ಬ್ಯಾಂಕ್ ನಲ್ಲಿ ತನಿಖೆ ನಡೆಯದಂತೆ ಹೈಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಕಿಡಿಕಾರಿದರು.

ಆಗಾಗ ಮಕ್ಕಳನ್ನು ಕಾಡುವ ತಲೆನೋವಿನ ಬಗ್ಗೆ ನಿರ್ಲಕ್ಷ್ಯ ಬೇಡ

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಮಹಾ ಮಂಡಳಿ ವಿಭಜನೆಗೆ ಶಾಸಕ ರಮೇಶ್ ಕುಮಾರ್, ಎನ್.ಹೆಚ್.ಶಿವಶಂಕರ ರೆಡ್ಡಿ ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಯಾರು ಎಷ್ಟೇ ತಡೆದರೂ ಎರಡು ಸಂಸ್ಥೆಗಳನ್ನು ವಿಭಜನೆ ಮಾಡಿಯೇ ಸಿದ್ಧ ಎಂದು ಗುಡುಗಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...