alex Certify ಮಾನಸಿಕ ಖಿನ್ನತೆ; ದುಡುಕಿನ ನಿರ್ಧಾರ ಕೈಗೊಂಡ ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನಸಿಕ ಖಿನ್ನತೆ; ದುಡುಕಿನ ನಿರ್ಧಾರ ಕೈಗೊಂಡ ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಿಕ್ಷಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯ ನಿವಾಸಿ ಜ್ಯೋತಿ (40) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. 12 ವರ್ಷಗಳ ಕಾಲ ಬನವತಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಕಳೆದ 9 ತಿಂಗಳ ಹಿಂದಷ್ಟೇ ತುರುವಿನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಯಾಗಿ ಸೇವೆ ಸಲ್ಲಿಸುತ್ತಿದ್ದರು.

ಈ ವೇಳೆ ಮತ್ತೊಂದು ಶಾಲೆಗೆ ವರ್ಗಾವಣೆಗೆ ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ.

ವಿವಾಹವಾಗಿ 13 ವರ್ಷಗಳಾದರೂ ಮಕ್ಕಳಿರಲಿಲ್ಲ. ಇದರಿಂದ ತೀವ್ರವಾಗಿ ನೊಂದಿದ್ದ ಶಿಕ್ಷಕಿ ಜ್ಯೋತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಖಿನ್ನತೆಯಿಂದ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...