alex Certify ಮಾಲೀಕನ ಜೀವ ಉಳಿಸಿದ ಶ್ವಾನ…! ಶಿವಮೊಗ್ಗದಲ್ಲೊಂದು ಮನಕಲುಕುವ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಲೀಕನ ಜೀವ ಉಳಿಸಿದ ಶ್ವಾನ…! ಶಿವಮೊಗ್ಗದಲ್ಲೊಂದು ಮನಕಲುಕುವ ಘಟನೆ

ಶಿವಮೊಗ್ಗ: ಇದೊಂದು ಮನಮಿಡಿಯುವ ಕಥೆ. ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬ ನಿರ್ಜನ ಪ್ರದೇಶದಲ್ಲಿ ತಲೆ ಸುತ್ತಿ ಬಿದ್ದಿದ್ದು, ಕೊನೆಗೆ ಸಾಕು ನಾಯಿಯ ಕಾರಣಕ್ಕೆ ಪತ್ತೆಯಾಗಿ ಪ್ರಾಣಾಪಾಯದಿಂದ ಬಚಾವಾಗಿದ್ದಾನೆ. ಇಂತದೊಂದು ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡೂರಿನಲ್ಲಿ ನಡೆದಿದೆ.

ಹೌದು, ಇಲ್ಲಿನ ಶೇಖರಪ್ಪ ಎಂಬಾತ ಆಯನೂರಿನ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ಬೆಳಗ್ಗೆ ಸುಮಾರು 6 ಗಂಟೆಗೆ ಕಟ್ಟಿಗೆ ತರೋದಿಕ್ಕೆ ಕಾಡಿಗೆ ಹೋಗಿದ್ದಾರೆ. 10 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದವ ಎಷ್ಟೊತ್ತಾದರೂ ಮನೆಗೆ ಬಂದಿಲ್ಲ. ಹೀಗಾಗಿ ಊರಿನ ಒಂದಿಷ್ಟು ಜನರಿಗೆ ವಿಚಾರ ತಿಳಿಸಿದ್ದಾರೆ ಮನೆಯವರು. ಊರಿನವರು ಈತನನ್ನು ಹುಡುಕಲು ಕಾಡಿಗೆ ಹೋಗಿದ್ದಾರೆ. ಕಾಡಿನಲ್ಲಿ ಎಷ್ಟು ಹುಡುಕಿದರು ಶೇಖರಪ್ಪನ ಸುಳಿವು ಸಿಗಲೇ ಇಲ್ಲ.

ಆದರೆ ಈತ ಸಾಕಿದ್ದ ನಾಯಿಯೊಂದು ಶೇಖರಪ್ಪ ಇರುವ ಜಾಗ ಪತ್ತೆ ಹಚ್ಚಿ. ಸುಮಾರು ನಾಲ್ಕು ಗಂಟೆ ಸುಮಾರಿಗೆ ಶೇಖರಪ್ಪ ಇರುವ ಜಾಗಕ್ಕೆ ಊರಿನವರನ್ನು ಕರೆ ತಂದಿದೆ. ತಕ್ಷಣವೇ ಶೇಖರಪ್ಪನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಈ ನಾಯಿ ಪ್ರತಿನಿತ್ಯ ಮಾಲೀಕನ ಜೊತೆಯಲ್ಲಿ ಹೋಗುತ್ತಿತ್ತಂತೆ. ಹಾಗಾಗಿಯೇ ಶೇಖರಪ್ಪನನ್ನು ಪತ್ತೆ ಮಾಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...