alex Certify ಮುಂದುವರೆದ ಪುನೀತ್ ಅಭಿಮಾನಿಗಳ ಸಾವಿನ ಸರಣಿ; ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಅಭಿಮಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದುವರೆದ ಪುನೀತ್ ಅಭಿಮಾನಿಗಳ ಸಾವಿನ ಸರಣಿ; ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಅಭಿಮಾನಿ

ರಾಮನಗರ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದಿಂದ ಆಘಾತಕ್ಕೊಳಗಾದ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಪುನೀತ್ ಅವರ ಮತ್ತೋರ್ವ ಅಪ್ಪಟ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಎಲೆಕೇರಿಯ 26 ವರ್ಷದ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಅಭಿಮಾನಿ. ವೆಂಕಟೇಶ್, ಅಪ್ಪು ಅಪ್ಪಟ ಅಭಿಮಾನಿಯಾಗಿದ್ದು, ಅಪ್ಪು ಹಠಾತ್ ಸಾವಿನಿಂದ ಆಘಾತಕ್ಕೊಳಗಾಗಿದ್ದರು. ಅವರ ಸಮಾಧಿಯನ್ನಾದರೂ ನೋಡಬೇಕು ಎಂಬ ಆಶಯ ಹೊಂದಿದ್ದರಂತೆ. ಆದರೆ ಈಗ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅಪ್ಪು ಅಗಲಿಕೆ ದುಃಖದಿಂದ ಮೂರು ದಿನಗಳಿಂದ ಊಟ ಬಿಟ್ಟಿದ್ದ ವೆಂಕಟೇಶ್ ಇದೀಗ ಸಾವಿಗೆ ಶರಣಾಗಿದ್ದು, ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...