alex Certify ಮುರುಘಾ ಶ್ರೀ ಬಂಧನದ ಬೆನ್ನಲ್ಲೇ ‘ಬಸವ ಶ್ರೀ’ ಪ್ರಶಸ್ತಿ ಹಿಂದಿರುಗಿಸಿದ ಪತ್ರಕರ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಶ್ರೀ ಬಂಧನದ ಬೆನ್ನಲ್ಲೇ ‘ಬಸವ ಶ್ರೀ’ ಪ್ರಶಸ್ತಿ ಹಿಂದಿರುಗಿಸಿದ ಪತ್ರಕರ್ತ

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಲಾಗಿದ್ದು, ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 5ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಮುರುಘಾ ಮಠದಿಂದ ತಮಗೆ ನೀಡಲಾಗಿದ್ದ ‘ಬಸವ ಶ್ರೀ’ ಪ್ರಶಸ್ತಿಯನ್ನು ಖ್ಯಾತ ಪತ್ರಕರ್ತ ಪಿ. ಸಾಯಿನಾಥ್ ಹಿಂದಿರುಗಿಸಲು ನಿರ್ಧರಿಸಿದ್ದು, ಇದರ ಜೊತೆಗೆ ಕೊಟ್ಟ 5 ಲಕ್ಷ ರೂಪಾಯಿಗಳ ಚೆಕ್ ಸಹ ಮರಳಿಸುತ್ತಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಶ್ರೀಗಳ ಕುರಿತ ಆರೋಪಗಳನ್ನು ಮಾಧ್ಯಮಗಳಲ್ಲಿ ನೋಡಿ ವಿಚಲಿತನಾಗಿದ್ದೇನೆ. ಮಕ್ಕಳ ಮೇಲೆ ದೌರ್ಜನ್ಯವೆಸಗಿರುವ ಕೃತ್ಯವನ್ನು ಖಂಡಿಸಲು ಶಬ್ದಗಳು ಸಾಕಾಗುವುದಿಲ್ಲ. ಈ ಪ್ರಕರಣದ ಸಂತ್ರಸ್ತ ಬಾಲಕಿಯರ ಜೊತೆ ನಾವಿದ್ದೇವೆ. ಆ ಬಾಲಕಿಯರಿಗೆ ನ್ಯಾಯ ಸಿಗಬೇಕು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...