alex Certify ಮೃತಪಟ್ಟವರಿಗೂ ಸದಸ್ಯ ಸ್ಥಾನ ನೀಡಿ ನಗೆಪಾಟಲಿಗೀಡಾದ ರಾಜ್ಯ ಸರ್ಕಾರ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೃತಪಟ್ಟವರಿಗೂ ಸದಸ್ಯ ಸ್ಥಾನ ನೀಡಿ ನಗೆಪಾಟಲಿಗೀಡಾದ ರಾಜ್ಯ ಸರ್ಕಾರ…!

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಧವಾರದಂದು 21 ವಿವಿಧ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ನೂತನ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪೈಕಿ ಒಂದು ಪ್ರತಿಷ್ಠಾನದ ನೇಮಕದಲ್ಲಿ ಎಡವಟ್ಟು ಮಾಡಿಕೊಂಡಿದೆ.

ಚಿಕ್ಕಮಗಳೂರಿನ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ನೂತನ ಸದಸ್ಯರ ಪಟ್ಟಿಯಲ್ಲಿ ತೇಜಸ್ವಿ ಅವರ ಧರ್ಮಪತ್ನಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರ ಹೆಸರಿದ್ದು, ಆದರೆ ಅವರು 2021ರ ಡಿಸೆಂಬರ್ ನಲ್ಲಿ ನಿಧನರಾಗಿದ್ದಾರೆ.

ಮೃತರಾದವರಿಗೂ ಸದಸ್ಯ ಸ್ಥಾನ ನೀಡಿ ಸಾರ್ವಜನಿಕ ವಲಯದಲ್ಲಿ ನಗೆಪಾಟಲಿಗೀಡಾಗಿದ್ದು, ಮೂಲಗಳ ಪ್ರಕಾರ ಅಂತಿಮ ಪಟ್ಟಿ ಸಿದ್ಧಗೊಳ್ಳುವ ಮುನ್ನವೇ ಇದನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...