alex Certify ಮೇಕೆದಾಟು ಪಾದಯಾತ್ರೆ; ಸಾಧು ಕೋಕಿಲಾಗೆ ಸೆಲೆಬ್ರಿಟಿಗಳನ್ನು ಕರೆತರುವ ಜವಾಬ್ದಾರಿ ನೀಡಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಕೆದಾಟು ಪಾದಯಾತ್ರೆ; ಸಾಧು ಕೋಕಿಲಾಗೆ ಸೆಲೆಬ್ರಿಟಿಗಳನ್ನು ಕರೆತರುವ ಜವಾಬ್ದಾರಿ ನೀಡಿದ ಕಾಂಗ್ರೆಸ್

ಬೆಂಗಳೂರು: ಜನವರಿ 9ರಿಂದ ಮೇಕೆದಾಟು ಯೋಜನೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆಗೆ ಕಾಂಗ್ರೆಸ್ ಕರೆ ನೀಡಿದೆ. ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ಕುರಿತ ಪೂರ್ವಭಾವಿ ಸಭೆ ನಡೆಯಲಿದ್ದು, ಅಂತಿಮ ರೂಪುರೇಷೆ ಸಿದ್ಧವಾಗಲಿದೆ.

ಮೇಕೆದಾಟು ಪಾದಯಾತ್ರೆಗೆ ಈ ಬಾರಿ ಕನ್ನಡ ಚಿತ್ರರಂಗ ನಟ-ನಟಿಯರು ಕೂಡ ಪಾಲ್ಗೊಳ್ಳುವ ನಿರೀಕ್ಷೆ ಇದೆ. ನಟ, ಸಂಗೀತ ಸಂಯೋಜಕ ಸಾಧು ಕೋಕಿಲಾ ಅವರಿಗೆ ಪಾದಯಾತ್ರೆಗೆ ಸೆಲೆಬ್ರಿಟಿಗಳನ್ನು ಕರೆತರುವ ಜವಾಬ್ದಾರಿಯನ್ನು ಕಾಂಗ್ರೆಸ್ ವಹಿಸಿದೆ.

BIG NEWS: ಕೃಷಿ ಕಾಯ್ದೆ ಮತ್ತೆ ಜಾರಿ ಬಗ್ಗೆ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟನೆ

2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿದ್ದ ಸಾಧು ಕೋಕಿಲಾ ಅವರಿಗೆ ಈ ಬಾರಿ ಮಹತ್ವದ ಜವಾಬ್ದಾರಿ ನೀಡಲಾಗಿದ್ದು, ಪಾದಯಾತ್ರೆಗೆ ಇಡೀ ಕನ್ನಡ ಚಿತ್ರರಂಗವೇ ಬೆಂಬಲ ನಿಡುವುದು ಬಹುತೇಕ ಖಚಿತವಾಗಿದೆ.

ಪರಿಷತ್ ಚುನಾವಣೆ ಫಲಿತಾಂಶದ ನಿರೀಕ್ಷೆ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದಂತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...