alex Certify ಮೇಲುಕೋಟೆಯ ‘ಬಾಹುಬಲಿ’ ಕಾಳಮೇಘಂ ರಾಮಸ್ವಾಮಿ ಅಯ್ಯಂಗಾರ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಲುಕೋಟೆಯ ‘ಬಾಹುಬಲಿ’ ಕಾಳಮೇಘಂ ರಾಮಸ್ವಾಮಿ ಅಯ್ಯಂಗಾರ್ ಇನ್ನಿಲ್ಲ

ಮೇಲುಕೋಟೆಯ ಬಾಹುಬಲಿ ಎಂದೇ ಹೆಸರಾಗಿದ್ದ 75 ವರ್ಷದ ಕಾಳಮೇಘಂ ರಾಮಸ್ವಾಮಿ ಅಯ್ಯಂಗಾರ್ ಸೋಮವಾರದಂದು ವಿಧಿವಶರಾಗಿದ್ದಾರೆ.

ರಾಮಸ್ವಾಮಿ ಅಯ್ಯಂಗಾರ್ ರವರು ಯೋಗಾ ನರಸಿಂಹ ಸ್ವಾಮಿ ಬೆಟ್ಟದ ದೇವಾಲಯದಲ್ಲಿ ಅಡುಗೆ ಮನೆ ಕೈಂಕರ್ಯ ಮಾಡುತ್ತಿದ್ದರು.

ಅವರು ಭಾರಿ ಗಾತ್ರದ ಪಾತ್ರೆಯಲ್ಲಿ ಬೆಟ್ಟದ ಮಧ್ಯದ ಭಾಗದ ಬಾವಿಯಿಂದ ನೀರು ತೆಗೆದುಕೊಂಡು ನೂರಾರು ಮೆಟ್ಟಿಲುಗಳನ್ನು ಹತ್ತಿ ನರಸಿಂಹನ ಅಭಿಷೇಕ ಮತ್ತು ಪ್ರಸಾದಗಳಿಗೆ ಸೇವೆ ಸಮರ್ಪಿಸಿದ್ದರು.

ಈ ಕಾರಣಕ್ಕಾಗಿಯೇ ಅವರನ್ನು ಮೇಲುಕೋಟೆಯ ಬಾಹುಬಲಿ ಎಂದೇ ಗುರುತಿಸಲಾಗುತ್ತಿತ್ತು. ತಮ್ಮ ಸೇವಾವಧಿಯಲ್ಲಿ ಒಂದು ದಿನವೂ ಅನಾರೋಗ್ಯದಿಂದ ಮಲಗದ ಅವರು ಸೋಮವಾರ ಸೌರಮಾನ ನರಸಿಂಹ ಜಯಂತಿಯಂದೇ ವೈಕುಂಠ ವಾಸಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...