alex Certify ಮೇ 8ರಂದು ಬಿ.ವೈ. ವಿಜಯೇಂದ್ರ ಪರ ಖ್ಯಾತ ನಟ ಕಿಚ್ಚ ಸುದೀಪ್ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 8ರಂದು ಬಿ.ವೈ. ವಿಜಯೇಂದ್ರ ಪರ ಖ್ಯಾತ ನಟ ಕಿಚ್ಚ ಸುದೀಪ್ ಪ್ರಚಾರ

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟು ಕೊಟ್ಟಿದ್ದು, ಬಿ.ವೈ. ವಿಜಯೇಂದ್ರ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಖ್ಯಾತ ನಟ ಕಿಚ್ಚ ಸುದೀಪ್, ಮೇ 8ರಂದು ಶಿಕಾರಿಪುರ ಹಾಗೂ ಶಿರಾಳಕೊಪ್ಪ ಪಟ್ಟಣದಲ್ಲಿ ಬಿ.ವೈ. ವಿಜಯೇಂದ್ರ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಬಿ.ವೈ. ವಿಜಯೇಂದ್ರ ಅವರೇ ಬುಧವಾರದಂದು ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದು, ಮೇ 8 ರಂದು ಬೆಳಿಗ್ಗೆ ಶಿಕಾರಿಪುರ ಪಟ್ಟಣದಲ್ಲಿ ಹಾಗೂ ಮಧ್ಯಾಹ್ನ ಶಿರಾಳಕೊಪ್ಪ ಪಟ್ಟಣದಲ್ಲಿ ಸುದೀಪ್ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...