alex Certify ಮೈತ್ರಿ ಬಗ್ಗೆ JDS ತೀರ್ಮಾನಿಸಲಿ; ಈ ಬಾರಿ ಸ್ಪಷ್ಟ ಬಹುಮತ ಬರಲಿದೆ ಎಂದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈತ್ರಿ ಬಗ್ಗೆ JDS ತೀರ್ಮಾನಿಸಲಿ; ಈ ಬಾರಿ ಸ್ಪಷ್ಟ ಬಹುಮತ ಬರಲಿದೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಕೂಡ ಸ್ಪರ್ಧಿಸಿದೆ. ಬಿಜೆಪಿ ಜತೆ ಮೈತ್ರಿ ಬಗ್ಗೆ ಜೆಡಿಎಸ್ ಅಂತಿಮ ತೀರ್ಮಾನ ಕೈಗೊಳ್ಳಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜೆಡಿಎಸ್ ಸ್ಪರ್ಧಿಸದ ಕಡೆಗಳಲ್ಲಿ ನಾವು ಬೆಂಬಲ ಕೇಳಿದ್ದೇವೆ. ಮೈತ್ರಿ ಬಗ್ಗೆ ಜೆಡಿಎಸ್ ನಾಯಕರೇ ನಿರ್ಧಾರ ಪ್ರಕಟಿಸಬೇಕು. ರಾಜ್ಯದಲ್ಲಿ 15 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಪರಿಷತ್ ನಲ್ಲಿ ನಮಗೆ ಸ್ಪಷ್ಟ ಬಹುಮತವಿರಲಿಲ್ಲ. ಈ ಬಾರಿ ನಾಮಗೆ ಬಹುಮತ ಬರುತ್ತೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮಹದಾಯಿ ಹೋರಾಟಗಾರರಿಗೆ ಸಮನ್ಸ್ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...