alex Certify ಮೈಸೂರು ಡಿಸಿಯಾಗಿ ಗೌತಮ್ ಬಗಾದಿ ಅಧಿಕಾರ ಸ್ವೀಕಾರ; ನೂತನ ಆಯುಕ್ತ ಲಕ್ಷ್ಮೀಕಾಂತ್ ರೆಡ್ದಿಗೆ ಅಧಿಕಾರ ಹಸ್ತಾಂತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ಡಿಸಿಯಾಗಿ ಗೌತಮ್ ಬಗಾದಿ ಅಧಿಕಾರ ಸ್ವೀಕಾರ; ನೂತನ ಆಯುಕ್ತ ಲಕ್ಷ್ಮೀಕಾಂತ್ ರೆಡ್ದಿಗೆ ಅಧಿಕಾರ ಹಸ್ತಾಂತರ

ಮೈಸೂರು: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷದ ಬೆನ್ನಲ್ಲೇ ಇಬ್ಬರು ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ನೂತನ ಜಿಲ್ಲಾಧಿಕಾರಿಯಾಗಿ ಗೌತಮ್ ಬಗಾದಿ ಹಾಗೂ ಪಾಲಿಕೆ ನೂತನ ಆಯುಕ್ತರಾಗಿ ಲಕ್ಷ್ಮಿಕಾಂತ್ ರೆಡ್ಡಿ ಅಧಿಕಾರ ವಹಿಸಿಕೊಂಡಿದ್ದಾರೆ.

ರೋಹಿಣಿ ಸಿಂಧೂರಿ ಅವರ ಅನುಪಸ್ಥಿತಿಯಲ್ಲಿಯೇ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ, ನೂತನ ಜಿಲ್ಲಾಧಿಕಾರಿ ಗೌತಮ್ ಬಗಾದಿಯವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಇದೇ ವೇಳೆ ವರ್ಗಾವಣೆ ಬೆನ್ನಲ್ಲೇ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್, ನೂತನ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...