alex Certify ‘ಮೈಸೂರು ದಸರಾ’ ಗೆ ತೆರಳುವವರಿಗೆ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೈಸೂರು ದಸರಾ’ ಗೆ ತೆರಳುವವರಿಗೆ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್

ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ದಸರಾ ಮಹೋತ್ಸವ ಈಗ ತನ್ನ ಎಂದಿನ ವೈಭವವನ್ನು ಮರಳಿ ಪಡೆದಿದೆ. ಮೈಸೂರಿನಲ್ಲಿ ಅದ್ದೂರಿ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಅಲ್ಲಿಗೆ ತೆರಳುವವರಿಗೆ ರೈಲ್ವೆ ಇಲಾಖೆ, ಗುಡ್ ನ್ಯೂಸ್ ನೀಡಿದೆ.

ನೈರುತ್ಯ ರೈಲ್ವೆ, ದಸರಾ ಸಂದರ್ಭದಲ್ಲಿ ಹೆಚ್ಚುವರಿ ರೈಲು ಸೇವೆ ನೀಡುವ ಉದ್ದೇಶದಿಂದ ವಿಶೇಷ ರೈಲುಗಳನ್ನು ಆರಂಭಿಸುತ್ತಿದೆ. ಮೈಸೂರು – ಕೆಎಸ್ಆರ್ ಬೆಂಗಳೂರು – ಮೈಸೂರು ನಡುವೆ ಕಾಯ್ದಿರಿಸದ ಎಕ್ಸ್ ಪ್ರೆಸ್ ಅಕ್ಟೋಬರ್ 5ರಂದು ರಾತ್ರಿ 11:30 ಕ್ಕೆ ಮೈಸೂರಿಂದ ಹೊರಟು ಮರುದಿನ ಬೆಳಗ್ಗೆ 2:45ಕ್ಕೆ ಬೆಂಗಳೂರು ತಲುಪಲಿದೆ.

ಅದೇ ರೀತಿ ಅಕ್ಟೋಬರ್ 6ರಂದು ಮಧ್ಯಾಹ್ನ 3ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 6:20ಕ್ಕೆ ಮೈಸೂರು ತಲಪಲಿದೆ. ಮೈಸೂರು – ಚಾಮರಾಜನಗರ – ಮೈಸೂರು ನಡುವೆ ಕಾಯ್ದಿರಿಸದ ಎಕ್ಸ್ ಪ್ರೆಸ್ ಸೇವೆ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 6 ರ ವರೆಗೆ ಇರಲಿದೆ. ಮೈಸೂರಿನಿಂದ ಬೆಳಗ್ಗೆ 8-20ಕ್ಕೆ ಹೊರಡುವ ಈ ರೈಲು ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರ ತಲುಪಲಿದೆ.

ಹಾಗೆಯೇ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 6ರ ವರೆಗೆ ಚಾಮರಾಜನಗರದಿಂದ ಬೆಳಗ್ಗೆ 10:55 ಕ್ಕೆ ಹೊರಡುವ ರೈಲು 12:25ಕ್ಕೆ ಮೈಸೂರು ತಲಪಲಿದೆ. ಅದೇ ರೀತಿ ಮೈಸೂರು – ಧಾರವಾಡ – ಮೈಸೂರು ಎಕ್ಸ್ ಪ್ರೆಸ್ ರೈಲು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 6 ರ ವರೆಗೆ ಎರಡೂ ಕಡೆಯಿಂದ ಪ್ರಯಾಣ ಆರಂಭಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...