ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರ ಈ ಯೋಜನೆ ಹಿಂಪಡೆಯಬೇಕು ಎಂದು ಆಗ್ರಹಿಸಿವೆ.
ಕೋಳಿ ಮೊಟ್ಟೆ ಸಂಪೂರ್ಣ ಮಾಂಸಾಹಾರವಾಗಿದೆ. ಮೊಟ್ಟೆ ಕೊಡುವುದರಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗುತ್ತದೆ. ಶಾಲೆಗಳಲ್ಲಿ ಮೊಟ್ಟೆ ಕೊಡುವುದರಿಂದ 2 ಗುಂಪುಗಳು ರಚನೆಯಾಗುತ್ತವೆ. ಸಸ್ಯಾಹಾರಿ, ಮಾಂಸಾಹಾರಿ ಎಂಬ 2 ವಿದ್ಯಾರ್ಥಿಗಳ ಗುಂಪು ರಚನೆಯಾಗುತ್ತದೆ. ಹಾಗಾಗಿ ಮಕ್ಕಳಿಗೆ ಸರ್ವಸಮ್ಮತ ಆಹಾರವನ್ನು ನೀಡಬೇಕು ಎಂಬುದು ಕೆಲ ಸಮುದಾಯಗಳ ಅಭಿಮತ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳಲ್ಲಿ ಮೊಟ್ಟೆ ಯೋಜನೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ರಾಷ್ಟ್ರೀಯ ಲಿಂಗಾಯಿತ ಧರ್ಮ, ಮಹಾಸಭಾ ಬಸವ ಮಂಟಪದ ಜಗದ್ಗುರುಗಳು ಮನವಿ ಮಾಡಿದ್ದಾರೆ.