alex Certify ಮೊದಲ ದಿನವೇ ಹಳಿತಪ್ಪಿ ಆತಂಕ ಮೂಡಿಸಿದ್ದ ಸ್ಮಾರ್ಟ್ ರೈಲು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ದಿನವೇ ಹಳಿತಪ್ಪಿ ಆತಂಕ ಮೂಡಿಸಿದ್ದ ಸ್ಮಾರ್ಟ್ ರೈಲು…!

ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಪುಟಾಣಿ ರೈಲು ಸಂಚಾರ ಆರಂಭಿಸಲಾಗಿದೆ. ಶನಿವಾರದಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಇದಕ್ಕೆ ಚಾಲನೆ ನೀಡಿದ್ದಾರೆ.

ಚಾಲನೆ ನೀಡಿದ ಬಳಿಕ ಈ ಗಣ್ಯರು ಪುಟಾಣಿ ರೈಲಿನಲ್ಲಿ ಪ್ರಯಾಣಿಸಲು ಮುಂದಾಗಿದ್ದು, ಆದರೆ 100 ಮೀಟರ್ ಚಲಿಸುತ್ತಿದ್ದಂತೆಯೇ ಈ ರೈಲು ಹಳಿ ತಪ್ಪಿದೆ. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆದರೆ ರೈಲು ಅತಿ ಕಡಿಮೆ ವೇಗದಲ್ಲಿ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಕೂಡಲೇ ಪುಟಾಣಿ ರೈಲಿನಿಂದ ಕೆಳಗಿಳಿದ ಗಣ್ಯರು ಅವಘಡವನ್ನು ವೀಕ್ಷಿಸಿ ಬಳಿಕ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...