alex Certify ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದಾಗಲೇ ದುರಂತ; ರೈಲು ಡಿಕ್ಕಿಯಾಗಿ ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದಾಗಲೇ ದುರಂತ; ರೈಲು ಡಿಕ್ಕಿಯಾಗಿ ಮಹಿಳೆ ಸಾವು

ಶಿವಮೊಗ್ಗ: ರೈಲ್ವೆ ಹಳಿ ಸಮೀಪ ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಮಹಿಳೆಗೆ ರೈಲು ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವು ಕಂಡ ಘಟನೆ ಭದ್ರಾವತಿ ತಾಲ್ಲೂಕು ಮಸರಹಳ್ಳಿ ಬಳಿ ನಡೆದಿದೆ.

ಶಿವಮೊಗ್ಗದಿಂದ ಬೆಳಿಗ್ಗೆ 11-20 ಕ್ಕೆ ಬಿಡುವ ಮೈಸೂರು ರೈಲು ಭದ್ರಾವತಿ ಮಾರ್ಗವಾಗಿ ಸಾಗುತ್ತಿದ್ದಾಗ ಆಕಸ್ಮಿಕವಾಗಿ ಘಟನೆ ನಡೆದಿದೆ.

ಮೃತಪಟ್ಟ ಮಹಿಳೆ ರೈಲು ಬರುವ ವೇಳೆಯಲ್ಲಿ ತನ್ನ ಮಗನ ಜೊತೆಯಲ್ಲಿ ಮೊಬೈಲ್ ನಲ್ಲಿ ಮಾತಾಡುತ್ತಿದ್ದು, ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಅವರಿಗೆ ರೈಲು ಬರುವುದು ಗಮನಕ್ಕೆ ಬಂದಿಲ್ಲ.

ಮಹಿಳೆ ತಲೆಗೆ ರೈಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ನಿನ್ನೆ ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ತಿರುಗಾಡುತ್ತಿದ್ದರು. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...