alex Certify ಮೊಮ್ಮಗಳನ್ನು ನೋಡಿಕೊಂಡು ಬರುವಾಗಲೇ ದುರಂತ; ಮರಕ್ಕೆ ಕಾರು ಡಿಕ್ಕಿಯಾಗಿ ಇಂಜಿನಿಯರ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಮ್ಮಗಳನ್ನು ನೋಡಿಕೊಂಡು ಬರುವಾಗಲೇ ದುರಂತ; ಮರಕ್ಕೆ ಕಾರು ಡಿಕ್ಕಿಯಾಗಿ ಇಂಜಿನಿಯರ್ ಸಾವು

ಮಂಗಳವಾರವಷ್ಟೇ ಜನಿಸಿದ್ದ ತಮ್ಮ ಮೊಮ್ಮಗಳನ್ನು ನೋಡಿಕೊಂಡು ಬರುತ್ತಿದ್ದ ಇಂಜಿನಿಯರ್ ಒಬ್ಬರು ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯ ವಿವರ: ಕೆಪಿಟಿಸಿಎಲ್ ನಲ್ಲಿ ಜೂನಿಯರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ್ ಎಂಬವರು ತಮ್ಮ ಮೊಮ್ಮಗಳನ್ನು ನೋಡಿಕೊಂಡು ಬರಲು ಕುಟುಂಬ ಸಮೇತ ಶಿವಮೊಗ್ಗಕ್ಕೆ ತೆರಳಿದ್ದರು.

ವಾಪಸ್ ತೆರಳುವ ವೇಳೆ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದ ಬಿ ಕ್ಯಾಂಪ್ ಸಮೀಪದ ಶಿವಮೊಗ್ಗ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ.

ಇದರಿಂದ ಅಶೋಕ್ ಸ್ಥಳದಲ್ಲೇ ಮೃತಪಟ್ಟರೆ, ಅವರ ಪತ್ನಿ ಕಮಲಮ್ಮ, ವಾಹನ ಚಾಲನೆ ಮಾಡುತ್ತಿದ್ದ ಪುತ್ರ ವಿಜಯಕುಮಾರ್ ಹಾಗೂ ಗಂಗಾಧರ ಎಂಬವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ವಿಜಯಕುಮಾರ್ ಅವರ ಒಂದೂವರೆ ವರ್ಷದ ಪುತ್ರ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...