alex Certify ಮೋದಿ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಸುಬ್ರಮಣಿಯನ್ ಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಸುಬ್ರಮಣಿಯನ್ ಸ್ವಾಮಿ

ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಸ್ವಪಕ್ಷದ ನಾಯಕರ ವಿರುದ್ಧವೇ ಟೀಕೆಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಅದರಲ್ಲೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಸದಾಕಾಲ ಕಿಡಿ ಕಾರುತ್ತಲೇ ಇರುತ್ತಾರೆ.‌

ಇದೀಗ ಮೋದಿ ಸರ್ಕಾರದ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದು ಇದಕ್ಕೆ ಕಾರಣವಾಗಿರುವುದು ಶುಕ್ರವಾರದಂದು ದೇಶದಾದ್ಯಂತ ನಡೆದ ಘಟನೆ. ಪ್ರವಾದಿ ಮಹಮ್ಮದ್ ರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಬಂಧನಕ್ಕೆ ಆಗ್ರಹಿಸಿ ಮುಸ್ಲಿಮರು ಧಿಡೀರ್ ಪ್ರತಿಭಟನೆ ನಡೆಸಿದ್ದಾರೆ.

ಈ ಘಟನಾವಳಿಗಳ ಕುರಿತಂತೆ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಕಾಶ್ಮೀರವು ದೇಶದ ಇತರೆ ಭಾಗಗಳಂತೆ ಕಾಣಬೇಕು ಎಂದು ಎಲ್ಲರೂ ಬಯಸಿದ್ದರು. ಆದರೆ ಈಗ ಇಡೀ ಭಾರತವೇ ಕಾಶ್ಮೀರದಂತೆ ಕಾಣುತ್ತಿದೆ. ಗೃಹ ಸಚಿವ ಅಮಿತ್ ಶಾ ಅವರಿಗೆ ಇದರ ಅರಿವಿಲ್ಲವೇ ಎಂದು ಪ್ರಶ್ನಿಸಿರುವ ಅವರು, ಮುಂದಿನ 48 ಗಂಟೆಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದರೆ ಅಮಿತ್ ಶಾ ಅಧಿಕಾರದಲ್ಲಿ ಮುಂದುವರಿಯುವ ಕುರಿತು ಪ್ರಧಾನಿ ಮೋದಿ ನಿರ್ಧಾರ ಕೈಗೊಳ್ಳಬೇಕು ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...