alex Certify ಮೋರಿಗೆ ಡಿಕ್ಕಿ ಹೊಡೆದ ಕಾರಿಗೆ ಆಕಸ್ಮಿಕ ಬೆಂಕಿ: ಮಗು ಸೇರಿ ಇಬ್ಬರು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋರಿಗೆ ಡಿಕ್ಕಿ ಹೊಡೆದ ಕಾರಿಗೆ ಆಕಸ್ಮಿಕ ಬೆಂಕಿ: ಮಗು ಸೇರಿ ಇಬ್ಬರು ಸಜೀವ ದಹನ

ಬರಾನ್: ಮೋರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು,  ಒಂದೂವರೆ ವರ್ಷದ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ರಾಜಸ್ಥಾನದ ಬರಾನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಎನ್ಎಚ್ 27 ರಲ್ಲಿ ಈ ಘಟನೆ ಸಂಭವಿಸಿದೆ.

ಮನೀಶ್ ಚೌಧರಿ ತನ್ನ ಅತ್ತಿಗೆ ಲಕ್ಷ್ಮಿ, ಸೋದರಳಿಯ ಅನಿರುದ್ಧ ಮತ್ತು ಇತರ ಸಂಬಂಧಿಯೊಂದಿಗೆ ಬರನ್‌ನ ಖೈರುನಾ ಗ್ರಾಮದಿಂದ ಕೋಟಾದಲ್ಲಿ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಮನೀಶ್ ಎಂಬುವವರು ಕಾರು ಚಲಾಯಿಸುತ್ತಿದ್ದರು. ಕಾರು ಬ್ಯಾಲೆನ್ಸ್ ಕಳೆದುಕೊಂಡಾಗ ಡಿಕ್ಕಿ ಸಂಭವಿಸಿದೆ. ಕೂಡಲೇ ಮಾಹಿತಿ ಪಡೆದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವಷ್ಟರಲ್ಲಿ ಕಾರು ಸುಟ್ಟು ಭಸ್ಮವಾಗಿತ್ತು.

ಮನೀಷ್ ಮತ್ತು ಅವರ ಸೋದರಳಿಯ ಸ್ಥಳದಲ್ಲೇ ಸಾವನ್ನಪ್ಪಿದರೆ, ಲಕ್ಷ್ಮಿ ಮತ್ತು ಅವರ ಸಂಬಂಧಿ ತೀವ್ರವಾಗಿ ಸುಟ್ಟುಹೋಗಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...