alex Certify ಯಾವುದೇ ನಿರ್ಬಂಧಗಳಿಲ್ಲದೆ ಈ ಬಾರಿ ಅದ್ದೂರಿಯಾಗಿ ನಡೆಯಲಿದೆ ಶಬರಿಮಲೆ ಯಾತ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾವುದೇ ನಿರ್ಬಂಧಗಳಿಲ್ಲದೆ ಈ ಬಾರಿ ಅದ್ದೂರಿಯಾಗಿ ನಡೆಯಲಿದೆ ಶಬರಿಮಲೆ ಯಾತ್ರೆ

ಕೊರೊನಾ ಕಾರಣಕ್ಕಾಗಿ ಕಳೆದ ಮೂರು ವರ್ಷಗಳಿಂದಲೂ ಶಬರಿಮಲೆಗೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿತ್ತು. ಆದರೆ ಈಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ಕೇಂದ್ರ ಸೇರಿದಂತೆ ಬಹುತೇಕ ಎಲ್ಲ ರಾಜ್ಯಗಳು ಕೊರೊನಾ ನಿರ್ಬಂಧಗಳಲ್ಲಿ ಸಡಿಲಿಕೆ ಮಾಡಿವೆ.

ಇದೀಗ ಈ ಬಾರಿ ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತೆರಳುತ್ತಿದ್ದಾರೆ. ಇದರ ಮಧ್ಯೆ ಕೇರಳ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಕೊರೊನಾ ನಿರ್ಬಂಧಗಳನ್ನು ಪೂರ್ಣ ಪ್ರಮಾಣದಲ್ಲಿ ಸಡಿಲಿಕೆ ಮಾಡಿದೆ.

ಈ ಬಾರಿ ಶಬರಿಮಲೆ ಯಾತ್ರೆಯನ್ನು ಅದ್ದೂರಿಯಾಗಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದ್ದು, ಹೀಗಾಗಿ ಶಬರಿಮಲೆಗೆ ಬರುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗುವಂತೆ ಮಾರ್ಗ ಮಧ್ಯ ತಂಗಲು ವ್ಯವಸ್ಥೆ, ಆರೋಗ್ಯ ತಪಾಸಣೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...