alex Certify ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಸೇರುವುದು 8ನೇ ಅದ್ಭುತ ಇದ್ದಂತೆ – ಸತೀಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಸೇರುವುದು 8ನೇ ಅದ್ಭುತ ಇದ್ದಂತೆ – ಸತೀಶ್

ಬೆಳಗಾವಿ : ಜಿಲ್ಲೆಯಲ್ಲಿನ ಬಿಜೆಪಿ ನಾಯಕರ ಗುದ್ದಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಅವರದೇ ಪಕ್ಷ, ಅವರದೇ ಗುಂಪು ಈ ವಿಷಯವಾಗಿ ನಾನು ಹೇಗೆ ಮಾತನಾಡಲಿ ಎಂದು ಪ್ರಶ್ನಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅವರು ಮಂತ್ರಿ ಮಂಡಲ ಹಾಗೂ ಪಕ್ಷದ ಎಲ್ಲ ಶಾಸಕರ ಮೇಲೆ ನಿಯಂತ್ರಣ ಸಾಧಿಸಬೇಕು. ಅವರನ್ನು ಮೀರಿ ಯಾರೂ ಮಾತನಾಡಬಾರದು ಎಂದು ತಾಕೀತು ಮಾಡಬೇಕು. ಆಗ ಮಾತ್ರ ಇಂತಹ ಕಿತ್ತಾಟಗಳು ಹೊರಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಜಾರಕಿಹೊಳಿ ಸಹೋದರರ ವಿರುದ್ಧ ಸಚಿವ ಕತ್ತಿ ಸಿಎಂಗೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದಕ್ಕೆ ರಮೇಶ್ ಹಾಗೂ ಉಮೇಶ್ ಉತ್ತರ ನೀಡಬೇಕು. ಆದರೆ, ರಮೇಶ್ ಮರಳಿ ಕಾಂಗ್ರೆಸ್ ಗೆ ಬರುವುದಿಲ್ಲ. ಅವರು ಕಾಂಗ್ರೆಸ್ ಗೆ ಬರುವುದಾದರೆ ಅದು 8ನೇ ಅದ್ಭುತ ಇದ್ದಂತೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಗೆ ಬಿಜೆಪಿಯಿಂದ ಯಾರು ಬರುತ್ತಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ, ಬಜೆಟ್ ನ ನಂತರ ಈ ಪರ್ವ ಆರಂಭವಾಗಲಿದೆ. ಆಗ ಪಕ್ಷಾಂತರ ಶುರುವಾಗುತ್ತದೆ. ಏನೇ ಆದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...