alex Certify ರಷ್ಯಾದ ವಿರುದ್ಧ ಹೋರಾಡಲು ಪ್ರಜೆಗಳ ಕೈಗೆ ಶಸ್ತ್ರಾಸ್ತ್ರ ನೀಡಲು ಸಿದ್ಧ ಎಂದ ಉಕ್ರೇನ್​ ಅಧ್ಯಕ್ಷ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಷ್ಯಾದ ವಿರುದ್ಧ ಹೋರಾಡಲು ಪ್ರಜೆಗಳ ಕೈಗೆ ಶಸ್ತ್ರಾಸ್ತ್ರ ನೀಡಲು ಸಿದ್ಧ ಎಂದ ಉಕ್ರೇನ್​ ಅಧ್ಯಕ್ಷ….!

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​​​ ಉಕ್ರೇನ್​ ವಿರುದ್ಧ ಮಿಲಿಟರಿ ಕಾರ್ಯಾಚರಣೆಗೆ ಕರೆ ನೀಡುತ್ತಿದ್ದಂತೆಯೇ ರಷ್ಯಾದ ಸೇನೆಯು ಉಕ್ರೇನ್​ನ ಮೇಲೆ ಕ್ಷಿಪಣಿ ಹಾಗೂ ಬಾಂಬ್​ ದಾಳಿಯನ್ನು ನಡೆಸಿದೆ. ಇದರಿಂದಾಗಿ ಉಕ್ರೇನ್​ನಲ್ಲಿ ಪರಿಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಬಿಗಡಾಯಿಸುತ್ತಿದ್ದು ಉಕ್ರೇನ್​ನ ಅಧ್ಯಕ್ಷ ವೊಲೊಡಿಮಿರ್​ ಝೆಲೆನ್ಸ್ಕಿ ದೇಶವನ್ನು ರಕ್ಷಿಸುವ ಸಲುವಾಗಿ ದೇಶದ ಪ್ರಜೆಗಳೆಲ್ಲರಿಗೂ ಶಸ್ತ್ರಾಸ್ತ್ರವನ್ನು ಕೈಗೆತ್ತಿಕೊಳ್ಳುವಂತೆ ಕರೆ ನೀಡದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರುವ ವೊಲೊಡಿಮಿರ್​ ಝೆಲೆನ್ಸ್ಕಿ ರಷ್ಯಾದ ವಿರುದ್ಧ ಹೋರಾಡಲು ಇಚ್ಛಿಸುವ ದೇಶದ ಯಾವುದೇ ವ್ಯಕ್ತಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಲು ತಾವು ಸಿದ್ಧ ಎಂದು ಹೇಳಿದ್ದಾರೆ. ಅಲ್ಲದೇ ಉಕ್ರೇನ್​ನನ್ನು ರಕ್ಷಿಸಲು ಸಿದ್ಧರಾಗಿ ಎಂದು ನಾಗರಿಕರಿಗೆ ಕರೆ ನೀಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಪ್ರಾದೇಶಿಕ ರಕ್ಷಣೆಯ ಭಾಗವಾಗಿ ದೇಶದ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವ ಯಾವುದೇ ನಾಗರಿಕರ ವಿರುದ್ಧ ತಮ್ಮ ಸರ್ಕಾರವು ನಿರ್ಬಂಧಗಳನ್ನು ತೆಗೆದುಹಾಕುತ್ತದೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಇದಕ್ಕೂ ಮೊದಲು, ಉಕ್ರೇನ್ ರಷ್ಯಾದೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿತ್ತು. ಉಕ್ರೇನ್‌ನ ಬಹುತೇಕ ಎಲ್ಲಾ ಪ್ರಮುಖ ನಗರಗಳು ಈಗ ರಷ್ಯಾದ ಬೃಹತ್ ದಾಳಿಗೆ ಒಳಗಾಗಿವೆ. ಆದರೆ ರಷ್ಯಾ ಮಾತ್ರ ತಾನು ಮಿಲಿಟರಿ ಹಾಗೂ ವಾಯುನೆಲೆಗಳ ಮೇಲೆ ಮಾತ್ರ ದಾಳಿ ಮಾಡಿದ್ದೇವೆ. ನಾಗರಿಕರನ್ನು ಗುರಿಯಾಗಿಸಿಲ್ಲ ಎಂದು ಹೇಳಿಕೊಂಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...