alex Certify ರಾಘವೇಂದ್ರ ಗೆಲುವಿಗೆ ಸಹಕಾರಿಯಾದ ಸಂಘಟಿತ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಘವೇಂದ್ರ ಗೆಲುವಿಗೆ ಸಹಕಾರಿಯಾದ ಸಂಘಟಿತ ಪ್ರಚಾರ

ಶಿವಮೊಗ್ಗ : ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಭಾರಿ ಅಂತರದಿಂದ ಗೆಲುವು ಸಾಧಿಸಿರುವುದು ಪಕ್ಷದ ಮುಖಂಡರು ಕಾರ್ಯಕರ್ತರಲ್ಲಿ ಸಂಭ್ರಮ ಹೆಚ್ಚಿಸಿದೆ.

ರಾಘವೇಂದ್ರ ಕಡಿಮೆ ಅಂತರದಲ್ಲಿ ಜಯಗಳಿಸಬಹುದೆಂದು ಅನೇಕರ ಲೆಕ್ಕಾಚಾರವಾಗಿತ್ತು. ನಿರೀಕ್ಷೆಗಳನ್ನು ಹುಸಿಗೊಳಿಸಿ ರಾಘವೇಂದ್ರ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ರಾಘವೇಂದ್ರ ಪರವಾಗಿ ಪ್ರಧಾನಿ ಮೋದಿ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಎಚ್ ಡಿ ಕುಮಾರಸ್ವಾಮಿ ಬಸವರಾಜ ಬೊಮ್ಮಾಯಿ, ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ನಾಯಕರಾದ ಅಣ್ಣಾಮಲೈ, ರಾಧಾ ಮೋಹನ್ ದಾಸ್, ಸೇರಿದಂತೆ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದರು.

ಇನ್ನು ಜಿಲ್ಲೆಯ ನಾಯಕರಾದ ಜ್ಞಾನೇಂದ್ರ ಹರತಾಳು ಹಾಲಪ್ಪ, ಚನ್ನಬಸಪ್ಪ, ಕುಮಾರ್ ಬಂಗಾರಪ್ಪ, ಸೇರಿದಂತೆ ಹಲವು ನಾಯಕರು ಪ್ರಚಾರ ನಡೆಸಿದರು.

ಬಿಜೆಪಿಯ ಶಕ್ತಿಯಾಗಿರುವ ಕಾರ್ಯಕರ್ತರ ಪಡೆ ಸಂಘಟಿತ ಪ್ರಚಾರ ನಡೆಸಿದ್ದು ಮನೆಮನೆಗೆ ತೆರಳಿ ಮತದಾರರ ಮನವೊಲಿಸುವಲ್ಲಿ ಯಶಸ್ವಿಯಾಯಿತು. ಜೆಡಿಎಸ್ ಪಕ್ಷದ ಕಾರ್ಯಕರ್ತರು ಕೂಡ ಬಿಜೆಪಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನು ಸ್ವತಹ ರಾಘವೇಂದ್ರ ಅವರೇ ಒಪ್ಪಿಕೊಂಡಿದ್ದಾರೆ . ಜೆಡಿಎಸ್ ಮುಖಂಡರು ಕಾರ್ಯಕರ್ತರು ಮನೆಮನೆಗೆ ತೆರಳಿ ರಾಘವೇಂದ್ರ ಪರ ಪ್ರಚಾರ ನಡೆಸಿದರು. ಹೀಗೆ ಸಂಘಟಿತ ಪ್ರಯತ್ನದಿಂದ ರಾಘವೇಂದ್ರ ಗೆಲುವು ಸುಲಭವಾಗಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಲು ಸಾಧ್ಯವಾಯಿತು ಎನ್ನುವುದು ಪ್ರಮುಖ ಸಂಗತಿಯಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...