alex Certify ರಾಜಕೀಯದಿಂದ ನಿವೃತ್ತಿಯಾಗಲಿದ್ದಾರಾ ನಿತಿನ್ ಗಡ್ಕರಿ ? ಕುತೂಹಲ ಮೂಡಿಸಿದ ಕೇಂದ್ರ ಸಚಿವರ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯದಿಂದ ನಿವೃತ್ತಿಯಾಗಲಿದ್ದಾರಾ ನಿತಿನ್ ಗಡ್ಕರಿ ? ಕುತೂಹಲ ಮೂಡಿಸಿದ ಕೇಂದ್ರ ಸಚಿವರ ಹೇಳಿಕೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಮ್ಮ ಅಧಿಕಾರಾವಧಿಯಲ್ಲಿ ಅತ್ಯುತ್ತಮ ಕಾರ್ಯಗಳನ್ನು ಮಾಡಿದ್ದಾರೆ. ನಿತಿನ್ ಗಡ್ಕರಿ ಕಾರ್ಯವೈಖರಿ ಕುರಿತು ಸ್ವಪಕ್ಷೀಯರಲ್ಲದೇ ವಿಪಕ್ಷಗಳ ನಾಯಕರು ಸಹ ಹೊಗಳಿಕೆಯ ಮಾತುಗಳನ್ನಾಡುತ್ತಾರೆ.

ಮಹಾರಾಷ್ಟ್ರದ ನಾಗಪುರದವರಾದ ನಿತಿನ್ ಗಡ್ಕರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜೊತೆ ನಿಕಟ ಸಂಬಂಧ ಹೊಂದಿದ್ದು, ಆರಂಭದಿಂದಲೂ ಸಂಘಟನೆಯ ಜೊತೆ ಗುರುತಿಸಿಕೊಂಡಿದ್ದಾರೆ. ಇದರ ಮಧ್ಯೆ ಪ್ರಸ್ತುತ ಬಿಜೆಪಿ ವರಿಷ್ಠರ ಜೊತೆ ಅವರ ಬಾಂಧವ್ಯ ಉತ್ತಮವಾಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದಕ್ಕೆ ಪುಷ್ಠಿ ನೀಡುವಂತೆ ನಿತಿನ್ ಗಡ್ಕರಿಯವರು ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ನಾನು ಜೀವನದಲ್ಲಿ ಸಾಕಷ್ಟು ಕಾರ್ಯ ಮಾಡಿದ್ದೇನೆ. ಮುಂದೆ ಜನ ನನ್ನನ್ನು ಆಯ್ಕೆ ಮಾಡದಿದ್ದರೂ ಪರವಾಗಿಲ್ಲ ಎನ್ನುವ ಮೂಲಕ ರಾಜಕೀಯ ನಿವೃತ್ತಿಯ ಸುಳಿವು ನೀಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...