alex Certify ರಾಜ್ಯದಲ್ಲಿ ಇನ್ನೊಂದು ವಾರ ಪ್ರಚಾರ ನಡೆಸುವ ಪ್ರಧಾನಿ ಆಮೇಲೆ ಟಾಟಾ ಹೇಳುತ್ತಾರೆ; HDK ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇನ್ನೊಂದು ವಾರ ಪ್ರಚಾರ ನಡೆಸುವ ಪ್ರಧಾನಿ ಆಮೇಲೆ ಟಾಟಾ ಹೇಳುತ್ತಾರೆ; HDK ವ್ಯಂಗ್ಯ

ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಒಮ್ಮೆ ರಾಜ್ಯಕ್ಕೆ ಭೇಟಿ ನೀಡಿದ್ದು, ಬಿರುಗಾಳಿಯ ಪ್ರವಾಸ ನಡೆಸಿದ್ದಾರೆ. ಇಂದೂ ಕೂಡ ಆಗಮಿಸಲಿರುವ ನರೇಂದ್ರ ಮೋದಿಯವರು ವಿವಿಧ ಜಿಲ್ಲೆಗಳಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದರ ಮಧ್ಯೆ ಪ್ರಧಾನಿಯವರ ರಾಜ್ಯ ಭೇಟಿ ಕುರಿತು ವ್ಯಂಗ್ಯವಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಇನ್ನೊಂದು ವಾರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ಪ್ರಚಾರ ನಡೆಸುತ್ತಾರೆ. ಆಮೇಲೆ ರಾಜ್ಯಕ್ಕೆ ಟಾಟಾ ಹೇಳುತ್ತಾರೆ. ಮತ್ತೆ ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾತ್ರ ಎಂದು ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಸೋಮವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಯಾವುದೇ ಕಾರಣಕ್ಕೂ ಲಿಂಗಾಯತರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ. ಬ್ರಾಹ್ಮಣರನ್ನು ಸಿಎಂ ಆಗಿ ಮಾಡಲು ಈಗಾಗಲೇ ಸಿದ್ಧತೆ ನಡೆಯುತ್ತಿದ್ದು, ಇದನ್ನು ನಾನು ಮೊದಲೇ ಊಹಿಸಿದ್ದೇ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...