alex Certify ರಾಮ್​ಚರಣ್​​ಗೆ ಮುಂಬೈ ಥಿಯೇಟರ್​ನಲ್ಲಿ ಅಭಿಮಾನಿಗಳಿಂದ ಮುತ್ತಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮ್​ಚರಣ್​​ಗೆ ಮುಂಬೈ ಥಿಯೇಟರ್​ನಲ್ಲಿ ಅಭಿಮಾನಿಗಳಿಂದ ಮುತ್ತಿಗೆ

ಎಸ್​.ಎಸ್​ ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಸಿನಿಮಾ ಈಗಾಗಲೇ 900 ಕೋಟಿ ರೂಪಾಯಿಗಳಿಗೂ ಅಧಿಕ ಕಲೆಕ್ಷನ್ ಮಾಡಿದ ಐದನೇ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಗಿದೆ.

ಈ ಸಿನಿಮಾದಲ್ಲಿ ರಾಮ್​ ಚರಣ್​​ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ್ ರಾಜು ಹಾಗೂ ಜ್ಯೂನಿಯರ್​ ಎನ್​ಟಿಆರ್​ ಮತ್ತೊಬ್ಬ ಸ್ವಾತಂತ್ರ್ಯ ಹೋರಾಟಗಾರ ಕೊಮರಂ ಭೀಮ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಚಿರಂಜೀವಿ ಪುತ್ರ, ರಾಮ್ ಚರಣ್ ಭಾನುವಾರ ಮುಂವೈ ಏರ್​ಪೋರ್ಟ್​ಗೆ ಬರಿಗಾಲಿನಲ್ಲಿ ಬಂದಿಳಿದಿದ್ದಾರೆ. ರಾಮ್​ಚರಣ್​ 41 ದಿನಗಳ ಅಯ್ಯಪ್ಪ ದೀಕ್ಷೆಯ ಸುದೀರ್ಘ ಆಚರಣೆಯಲ್ಲಿದ್ದಾರೆ. ವಿಮಾನ ನಿಲ್ದಾಣ ಹಾಗೂ ಮುಂಬೈನ ಸಿನಿಮಾ ಥಿಯೇಟರ್​ನಲ್ಲಿ ಕಪ್ಪು ಬಣ್ಣದ ಕುರ್ತಾ ಪೈಜಾಮಾದಲ್ಲಿ ಕಾಣಿಸಿದ್ದಾರೆ.

ಮುಂಬೈನ ಸಿಂಗಲ್​ ಸ್ಕ್ರೀನ್​ ಥಿಯೇಟರ್​ಗೆ ಆಗಮಿಸಿದ ರಾಮ್​ಚರಣ್​​ರನ್ನು ಅಭಿಮಾನಿಗಳು ಮುತ್ತಿದ್ದಾರೆ. ಈ ಘಟನೆಯ ಫೋಟೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...