alex Certify ರಾಯಣ್ಣನ ಮೂರ್ತಿ ಧ್ವಂಸಗೊಳಿಸಿದವರ ವಿರುದ್ದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಯಣ್ಣನ ಮೂರ್ತಿ ಧ್ವಂಸಗೊಳಿಸಿದವರ ವಿರುದ್ದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕಿಡಿ

ಬೆಂಗಳೂರು : ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟದಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಧ್ವಂಸಗೊಳಿಸಿದ್ದಕ್ಕೆ ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಸ್ವಾತಂತ್ರಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿದ್ದ ಸೇನಾನಿ ಮೂರ್ತಿಯನ್ನು ಧ್ವಂಸಗೊಳಿಸಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ನಟ ದರ್ಶನ್ ಅವರು ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿನ ಅನಗೋಳದ ಕನಕದಾಸ ಕಾಲೋನಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಯಣ್ಣನ ಮೂರ್ತಿಯನ್ನು ಶನಿವಾರ ಬೆಳಿಗ್ಗೆ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಅಲ್ಲದೇ, ಕೈಯಲ್ಲಿದ್ದ ತಲ್ವಾರ್ ಸೇರಿದಂತೆ ಹಲವು ವಸ್ತುಗಳನ್ನು ಕಿತ್ತಿದ್ದಾರೆ. ಈ ಘಟನೆಯ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ದರ್ಶನ್ ಕೂಡ ವಿರೋಧಿಸಿದ್ದು, ತೀವ್ರವಾಗಿ ಖಂಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...