alex Certify ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನಿಗಳಿಗೆ ಹೋಲಿಸಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನಿಗಳಿಗೆ ಹೋಲಿಸಿದ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನಿಗಳಿಗೆ ಹೋಲಿಸಿದ್ದು, ಆರ್.ಎಸ್.ಎಸ್. ನಲ್ಲಿ ಯಾರೂ ದೇಶಭಕ್ತರಿಲ್ಲ. ಅವರುಗಳು ಸ್ವಾತಂತ್ರ್ಯಕ್ಕಾಗಿಯೂ ಹೋರಾಡಿಲ್ಲ. ಆದರೆ ಈಗ ತಾಲಿಬಾನಿಗಳಂತೆ ಕೈಯಲ್ಲಿ ದೊಣ್ಣೆ ಹಿಡಿದು ಬರುತ್ತಿದ್ದಾರೆ. ಹೀಗಾಗಿ ಎಚ್ಚರದಿಂದ ಇರಬೇಕು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ಬಿಜೆಪಿಯವರಿಗೆ ಈಗ ಗಾಂಧಿ -ಅಂಬೇಡ್ಕರ್ – ಪಟೇಲ್ ಅವರ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ. ಆದರೆ ಈ ಹಿಂದೆ ಇವರುಗಳೇ ಆ ಮಹಾನ್ ನಾಯಕರುಗಳನ್ನು ದ್ವೇಷ ಮಾಡುತ್ತಿದ್ದರು ಎಂದು ಕುಟುಕಿದರು.

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುವ ಬಿಜೆಪಿಯವರು ತಮ್ಮ ಸಚಿವ ಸಂಪುಟದಲ್ಲಿ ಒಬ್ಬ ಮುಸ್ಲಿಮರಿಗೂ ಅವಕಾಶ ನೀಡಿಲ್ಲ. ಸುಳ್ಳನ್ನು ಉತ್ಪಾದಿಸಿ ಮಾರಾಟ ಮಾಡುವಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರು ಸುಳ್ಳಿನ ಕಾರ್ಖಾನೆ ಇದ್ದಂತೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...