alex Certify ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ, ಕಾರಿನಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ, ಕಾರಿನಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ

ಆನೇಕಲ್: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಆನೇಕಲ್ ನ ಶಿವಾಜಿ ಸರ್ಕಲ್ ಹತ್ತಿರ ನಡೆದಿದ್ದು, ಉದ್ಯಮಿ ರಾಜಶೇಖರ್ ರೆಡ್ಡಿ ಎಂಬುವವರನ್ನೇ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

ಅವರು ಕಾರಿನಲ್ಲಿ ಕೋರ್ಟ್ ಗೆ ಹೋಗುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿದ್ದಾರೆ. ಹೀಗಾಗಿ ಕಾರಿನಲ್ಲಿಯೇ ಉದ್ಯಮಿ ಪ್ರಾಣ ಬಿಟ್ಟಿದ್ದಾರೆ.

ಉದ್ಯಮಿಯ ಕುತ್ತಿಗೆಗೆ ಗುಂಡು ತಾಕಿದೆ. ಹೀಗಾಗಿ ಕತ್ತಿನ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ರಕ್ತಸ್ರಾವವಾಗಿ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗುಂಡು ಹಾರಿಸಿದ್ದಲ್ಲದೇ, ಮಾರಕಾಸ್ತ್ರಗಳಿಂದಲೂ ದುಷ್ಕರ್ಮಿಗಳು ಅವರ ತಲೆಗೆ ಹೊಡೆದಿದ್ದಾರೆ.

ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಸಂಬಂಧಿಸಿದ ಸಾಕಷ್ಟು ದಾಖಲೆಗಳು ಪತ್ತೆಯಾಗಿವೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...