alex Certify ರೂಪದರ್ಶಿ ಕೊಲೆ ಪ್ರಕರಣ; ವಿಚಾರಣಾಧೀನ ಕೈದಿ ಆತ್ಮಹತ್ಯೆ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೂಪದರ್ಶಿ ಕೊಲೆ ಪ್ರಕರಣ; ವಿಚಾರಣಾಧೀನ ಕೈದಿ ಆತ್ಮಹತ್ಯೆ….?

ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಕೋಲ್ಕತ್ತಾ ಮೂಲದ ರೂಪದರ್ಶಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿ ನಾಗೇಶ್ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.

2019ರಲ್ಲಿ ಬೆಂಗಳೂರಿನ ಕೆಐಎಬಿ ಬಳಿ ಕೋಲ್ಕತ್ತಾ ಮೂಲದ ಮಾಡೆಲ್ ಪೂಜಾ ಸಿಂಗ್ ಹತ್ಯೆ ನಡೆದಿತ್ತು. ಈ ಪ್ರಕರಣ ಸಂಬಂಧ ಬಾಗಲೂರು ಪೊಲೀಸರು ನಾಗೇಶ್ ಎಂಬಾತನನ್ನು ಬಂಧಿಸಿದ್ದರು. ಕೊಲೆ ಪ್ರಕರಣದಲ್ಲಿ ಜೈಲು ವಾಸಕ್ಕೀಡಾಗಿದ್ದ ಆರೋಪಿ ನಾಗೇಶ್ ಇದೀಗ ಜೈಲಿನಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಆರೋಪಿ ಪೋಷಕರು ಚಿಕ್ಕಬಳ್ಳಾಪುರ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ನಾಗೇಶ್ ನಿನ್ನೆ ಸಂಜೆಯಷ್ಟೇ ತಂದೆ-ತಾಯಿ ಜೊತೆ ಮಾತನಾಡಿದ್ದ, ಆದಷ್ಟು ಬೇಗ ಬಿಡುಗಡೆಯಾಗಿ ಬರುವುದಾಗಿ ಹೇಳಿದ್ದ. ಆದರೆ ಇಂದು ಮಗ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ತನಿಖೆ ನಡೆಸುವಂತೆ ಪೋಷಕರು ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...