ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದ ನಂತ್ರ ಲಾಕ್ ಡೌನ್ ಬಗ್ಗೆ ಅಂತಿಮ ನಿರ್ಧಾರವೆಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಚಿವರು 15 ದಿನ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಸೂಚಿಸಿದ್ದಾರೆ. ಆದ್ರೆ ಪ್ರಧಾನಿ ಜೊತೆ ಮಾತನಾಡಿದ ನಂತ್ರ ಕ್ರಮವೆಂದು ಯಡಯೂರಪ್ಪ ಹೇಳಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ,ರಾಜ್ಯದಲ್ಲಿ ಬಿತ್ತನೆ ಬೀಜದ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಅಕಾಲಿಕ ಮಳೆಯಿಂದಾದ ಹಾನಿ ಬಗ್ಗೆ ಕ್ರಮಕೈಗೊಳ್ಳಲಾಗುವುದು.ಸಮೀಕ್ಷೆ ನಂತ್ರ ವರದಿ ನೀಡಲು ಸೂಚಿಸಿದ್ದೇನೆಂದು ಯಡಿಯೂರಪ್ಪ ಹೇಳಿದ್ದಾರೆ.
ಸಂಜೆಯೊಳಗೆ ಎಲ್ಲ ಉಸ್ತುವಾರಿ ಸಚಿವರ ನೇಮಕ ಮಾಡುವುದಾಗಿ ಅವರು ಹೇಳಿದ್ದಾರೆ. ಅಗತ್ಯ ಕೆಲಸ ಬಿಟ್ಟು ಏಪ್ರಿಲ್ 14ವರೆಗೆ ಯಾರೊಬ್ಬರೂ ಹೊರಗೆ ಬರಬೇಡಿ. ಹೊರಗೆ ಬಂದವರ ವಿರುದ್ಧ ಈಗಾಗಲೇ ಕ್ರಮಕೈಗೊಂಡಿದ್ದೇವೆಂದು ಸಿಎಂ ಹೇಳಿದ್ದಾರೆ.