alex Certify ರೈತರು – ಉದ್ಯಮಿಗಳಿಗೆ ಗುಡ್ ನ್ಯೂಸ್: ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು – ಉದ್ಯಮಿಗಳಿಗೆ ಗುಡ್ ನ್ಯೂಸ್: ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ

ರೈತರು, ಉದ್ಯಮಿಗಳು, ಯುವಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 13 ಯೋಜನೆಗಳ ಪ್ರಯೋಜನವನ್ನು ಪಡೆಯಬಹುದಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಹಣಕಾಸು ಸಚಿವಾಲಯ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನ ಸಮರ್ಥ್ ಪೋರ್ಟಲ್ ಗೆ ಚಾಲನೆ ನೀಡಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾಲ ಪಡೆಯಲು ಜನ ಮುಂದೆ ಬರುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

‘ಜನ ಸಮರ್ಥ್’ ಪೋರ್ಟಲ್ ನಲ್ಲಿ 13 ಯೋಜನೆಗಳ ವಿವರವನ್ನು ನೀಡಲಾಗುತ್ತಿದ್ದು, ಇದರ ಮೂಲಕ ಸಾಲ ಪಡೆಯಲು ಇಚ್ಚಿಸುವವರಿಗೆ ಅನುಕೂಲವಾಗುತ್ತದೆ. ಉದ್ಯಮಿಗಳು, ರೈತರು ಹಾಗೂ ಯುವಕರಿಗೆ ಇದು ಉಪಯುಕ್ತವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...