alex Certify ಲಾಲುಗೆ ಯಶಸ್ವಿ ಮೂತ್ರಪಿಂಡ ಶಸ್ತ್ರಚಿಕಿತ್ಸೆ: ಕಿಡ್ನಿ ನೀಡಿ ತಂದೆಯ ಜೀವ ಕಾಪಾಡಿದ ಪುತ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಲುಗೆ ಯಶಸ್ವಿ ಮೂತ್ರಪಿಂಡ ಶಸ್ತ್ರಚಿಕಿತ್ಸೆ: ಕಿಡ್ನಿ ನೀಡಿ ತಂದೆಯ ಜೀವ ಕಾಪಾಡಿದ ಪುತ್ರಿ

ಪಟ್ನಾ: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಅವರ ಮಗಳೇ ಜೀವದಾನ ಮಾಡಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಲಾಲು ಅವರಿಗೆ ಅವರ ಮಗಳು ರೋಹಿಣಿ ಆಚಾರ್ಯ ಮೂತ್ರಪಿಂಡ ದಾನ ಮಾಡಿ ತಂದೆಯ ಜೀವ ಕಾಪಾಡಿದ್ದಾರೆ.

ಸಿಂಗಪುರದಲ್ಲಿ ಯಶಸ್ವಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ನಡೆದಿದೆ. ಈ ಕುರಿತು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಟ್ವೀಟ್​ ಮೂಲಕ ಮಾಹಿತಿ ನಿಡಿದ್ದಾರೆ. ಸದ್ಯ ಲಾಲು ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ.

ಲಾಲು ಪ್ರಸಾದ್​ ಯಾದವ್ ಅವರಿಗೆ ಹಲವು ಆರೋಗ್ಯ ಸಮಸ್ಯೆಗಳು ಇವೆ. ಲಾಲು ಅವರು ಮೇವು ಪ್ರಕರಣದಲ್ಲಿ ಭಾಗಿಯಾಗಿ ಜೈಲು ಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಹೊರಗಿದ್ದು, ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆಗಾಗಿ ದೆಹಲಿ ಹಾಗೂ ರಾಂಚಿಯಲ್ಲಿ ಹಲವು ಬಾರಿ ಆಸ್ಪತ್ರೆ ಸೇರಿದ್ದರು. ಅವರು ಮಧುಮೇಹ, ರಕ್ತದೊತ್ತಡ, ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾಗ ಮಗಳು ಮುಂದಾಗಿ ತಂದೆಯ ಜೀವ ಕಾಪಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...