alex Certify ಲೋಕಾಯುಕ್ತ ಬಾಗಿಲು ಮುಚ್ಚಿಸಿದ್ದೆ ಕಾಂಗ್ರೆಸ್: ಅರಗ ಜ್ಞಾನೇಂದ್ರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಾಯುಕ್ತ ಬಾಗಿಲು ಮುಚ್ಚಿಸಿದ್ದೆ ಕಾಂಗ್ರೆಸ್: ಅರಗ ಜ್ಞಾನೇಂದ್ರ ಆರೋಪ

ಆಡಳಿತಾರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಕಾರಿದ್ದು, ಲೋಕಾಯುಕ್ತ ಸಂಸ್ಥೆಯ ಬಾಗಿಲನ್ನು ಮುಚ್ಚಿಸಿದ್ದೆ ಕಾಂಗ್ರೆಸ್ಸಿನವರು ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಿಮಿಕ್ ಮಾಡಿ ವೋಟು ಪಡೆಯಲು ಕಾಂಗ್ರೆಸ್ಸಿನವರು ಪ್ರಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇದಕ್ಕೆ ಮನ್ನಣೆ ನೀಡುವುದಿಲ್ಲ ಎಂದು ತಿಳಿಸಿದರು.

ಸ್ಯಾಂಟ್ರೋ ರವಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹುಟ್ಟಿಕೊಂಡಿಲ್ಲ ಎಂದು ಹೇಳಿದ ಅರಗ ಜ್ಞಾನೇಂದ್ರ, ಪಿಎಸ್ಐ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಈ ಹಿಂದೆ ಕಾಂಗ್ರೆಸ್ಸಿನಲ್ಲಿ ಇದ್ದ. ಅಲ್ಲದೆ ಆ ಪಕ್ಷದಿಂದ ಜಿಲ್ಲಾ ಪಂಚಾಯತ್ ಚುನಾವಣೆಗೂ ಸ್ಪರ್ಧಿಸಿದ್ದ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...