alex Certify ‘ವಂದೇ ಮಾತರಂ’ ಹಾಡಿನ ಮೂಲಕ ಕನ್ನಡದ ಸಾಧಕರಿಂದ ತಾಯಿ ಭಾರತಿಗೆ ಗೌರವ ಸಮರ್ಪಣೆ; ಸ್ಪೆಷಲ್ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವಂದೇ ಮಾತರಂ’ ಹಾಡಿನ ಮೂಲಕ ಕನ್ನಡದ ಸಾಧಕರಿಂದ ತಾಯಿ ಭಾರತಿಗೆ ಗೌರವ ಸಮರ್ಪಣೆ; ಸ್ಪೆಷಲ್ ವಿಡಿಯೋ ಸಾಂಗ್ ರಿಲೀಸ್

ಬೆಂಗಳೂರು: ದೇಶಾದ್ಯಂತ ಎಲ್ಲೆಲ್ಲೂ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಸಂಭ್ರಮ ಸಡಗರ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ, ಪ್ರಾಣ ತ್ಯಾಗ, ಬಲಿದಾನಗಳನ್ನು ಮಾಡಿದ ವೀರರನ್ನು ಸ್ಮರಿಸಲಾಗುತ್ತಿದೆ. ಕನ್ನಡ ಚಿತ್ರರಂಗ ಕೂಡ ಸ್ಪೆಷಲ್ ಸಾಂಗ್ ಮೂಲಕ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾಗಿಯಾಗುವ ಮೂಲಕ ಗಮನ ಸೆಳೆದಿದೆ.

ಗಾಯಕ ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿರುವ ʼವಂದೇ ಮಾತರಂʼ ಗೀತೆಯಲ್ಲಿ ಸ್ಯಾಂಡಲ್ ವುಡ್ ನ ನಟರು, ಸಾಧಕರು ಭಾಗಿಯಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಹಾಡನ್ನು ಹಂಚಿಕೊಳ್ಳಲಾಗಿದೆ. ಈ ಮೂಲಕ ಕನ್ನಡ ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಶುಭಾಶಯ ಕೋರಿದ್ದಾರೆ.

ನಟರಾದ ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ಜಗ್ಗೇಶ್, ರಮೇಶ್ ಅರವಿಂದ್, ಅನಂತ್ ನಾಗ್, ರವಿಚಂದ್ರನ್, ರಿಷಬ್ ಶೆಟ್ಟಿ, ಶ್ರೀಮುರಳಿ, ಗಣೇಶ್, ಧನಂಜಯ್, ಅಜಯ್ ರಾವ್, ಧ್ರುವ ಸರ್ಜಾ, ಅರ್ಜುನ್ ಸರ್ಜಾ ಮುಂತಾದ ಸ್ಯಾಂಡಲ್ ವುಡ್ ನ ಸ್ಟಾರ್ ನಟರು ವಂದೇ ಮಾತರಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಸಾಲುಮರದ ತಿಮ್ಮಕ್ಕ, ವೆಂಕಟೇಶ್ ಪ್ರಸಾದ್, ಎಸ್.ಎಲ್. ಭೈರಪ್ಪ ಮೊದಲಾದವರು ಕೂಡ ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಂದೇ ಮಾತರಂ ಹಾಡಿನ ಮೂಲಕ ಕನ್ನಡದ ಸಾಧಕರು ತಾಯಿ ಭಾರತಿಗೆ ಗೌರವ ನಮನ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...