alex Certify ವಾಣಿಜ್ಯ ತೆರಿಗೆ ಇಲಾಖೆ ಪ್ರಥಮ ದರ್ಜೆ ಸಹಾಯಕ ಜೆ.ಆರ್. ಉದಯ ಕುಮಾರ್ ಅವರಿಗೆ ಪ್ರಶಸ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಣಿಜ್ಯ ತೆರಿಗೆ ಇಲಾಖೆ ಪ್ರಥಮ ದರ್ಜೆ ಸಹಾಯಕ ಜೆ.ಆರ್. ಉದಯ ಕುಮಾರ್ ಅವರಿಗೆ ಪ್ರಶಸ್ತಿ

ಶಿವಮೊಗ್ಗ: ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ ಜೆ.ಆರ್. ಉದಯ ಕುಮಾರ್ ಅವರಿಗೆ ಮುಖ್ಯಮಂತ್ರಿಗಳ ಪ್ರಶಸ್ತಿ ದೊರೆತಿದೆ.

ಉದಯಕುಮಾರ್ ಅವರು ಶಿವಮೊಗ್ಗದ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು(ಆಡಳಿತ) ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ.

ಇವರು ತೀರ್ಥಹಳ್ಳಿ ತಾಲೂಕಿನ ಜಾಂಬವಳ್ಳಿ ಗ್ರಾಮದವರಾಗಿದ್ದಾರೆ. ಅವರ ಅತ್ಯುತ್ತಮ ಸೇವೆ ಗುರುತಿಸಿ ಮುಖ್ಯಮಂತ್ರಿಗಳ ಪ್ರಶಸ್ತಿ ಪತ್ರ ನೀಡಲಾಗಿದೆ. ಅವರಿಗೆ ಇಲಾಖೆಯ ಸಿಬ್ಬಂದಿ ಮತ್ತು ಗೆಳೆಯರು, ಕುಟುಂಬದವರು ಅಭಿನಂದನೆ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...