alex Certify ವಾಯು ವಿಹಾರಕ್ಕೆ ತೆರಳಿದ್ದಾಗ ಅಪಘಾತ; ಸ್ಯಾಂಡಲ್ ವುಡ್ ನಿರ್ಮಾಪಕ ಬಾಲರಾಜ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಯು ವಿಹಾರಕ್ಕೆ ತೆರಳಿದ್ದಾಗ ಅಪಘಾತ; ಸ್ಯಾಂಡಲ್ ವುಡ್ ನಿರ್ಮಾಪಕ ಬಾಲರಾಜ್ ವಿಧಿವಶ

ವಾಯು ವಿಹಾರಕ್ಕೆ ತೆರಳಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್ವುಡ್ ನಿರ್ಮಾಪಕ ಬಾಲರಾಜ್ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಜೆಪಿ ನಗರ 7ನೇ ಹಂತದ ನಿವಾಸಿಯಾಗಿದ್ದ ಬಾಲರಾಜ್ ಭಾನುವಾರ ಬೆಳಿಗ್ಗೆ 8ಗಂಟೆಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ರಸ್ತೆ ದಾಟುವಾಗ ಪಲ್ಸರ್ ಬೈಕ್ ಒಂದು ಅವರಿಗೆ ಡಿಕ್ಕಿ ಹೊಡೆದಿತ್ತು.

ಇದರಿಂದಾಗಿ ಪಾದಚಾರಿ ಮಾರ್ಗಕ್ಕೆ ಅಳವಡಿಸಿದ್ದ ಸಿಮೆಂಟ್ ಇಟ್ಟಿಗೆ ಅವರ ತಲೆಗೆ ಬಡಿದು ತೀವ್ರ ರಕ್ತಸ್ರಾವವಾಗಿತ್ತು. ಸ್ಥಳೀಯರೊಬ್ಬರು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರಾದರೂ ಪ್ರಯೋಜನವಾಗಲಿಲ್ಲ.

ಬಾಲರಾಜ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕರಿಯ’, ಕರಿಯ-2, ಗಣಪ ಮತ್ತು ಬರ್ಕ್ಲಿ ಚಿತ್ರಗಳನ್ನು ನಿರ್ಮಿಸಿದ್ದು, ಬಾಲರಾಜ್ ನಿಧನಕ್ಕೆ ಸ್ಯಾಂಡಲ್ವುಡ್ ಗಣ್ಯರು ಸಂತಾಪ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...