ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಮೀಷನರ್ ವಿನೂತ್ ಪ್ರಿಯಾ ಅವರನ್ನು ವರ್ಗಾವಣೆ ಮಾಡಿ, ಆ ಹುದ್ದೆಗೆ ಐಪಿಎಸ್ ಅಧಿಕಾರಿ ಹೇಮಂತ್ ಹೇಮಂತ್ ನಿಂಬಾಳ್ಕರ್’ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, 1998ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್ ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶಿಸಿದೆ.
ಈ ಹುದ್ದೆಯಲ್ಲಿದ್ದಂತ ಐಎಎಸ್ ಅಧಿಕಾರಿ ವಿನೂತ್ ಪ್ರಿಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.