alex Certify ‘ವಾಸ್ತವ್ಯ ಪ್ರಮಾಣ ಪತ್ರ’ ವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವಾಸ್ತವ್ಯ ಪ್ರಮಾಣ ಪತ್ರ’ ವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ವಾಸ್ತವ್ಯ ಪ್ರಮಾಣ ಪತ್ರವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ವಿದ್ಯುತ್ ಸಂಪರ್ಕ ಪಡೆಯಲು ವಾಸ್ತವ್ಯ ಪ್ರಮಾಣ ಪತ್ರ ಕಡ್ಡಾಯ ಎಂಬ ನಿಯಮವನ್ನು ತೆಗೆದು ಹಾಕಲಾಗಿದ್ದು, ಹೀಗಾಗಿ ವಿದ್ಯುತ್ ಸಂಪರ್ಕ ಪಡೆಯಲು ಗುರುತಿನ ಚೀಟಿ ಹಾಗೂ ಸ್ವತ್ತಿನ ಹಕ್ಕುಪತ್ರವಷ್ಟೇ ಸಾಕು ಎಂದು ಹೇಳಲಾಗಿದೆ.

ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯಿಂದ ತಿದ್ದುಪಡಿ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಸರ್ಕಾರದ ಈ ಹೊಸ ನೀತಿಯಿಂದ 5 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇಂಧನ ಸಚಿವ ವಿ. ಸುನಿಲ್ ಕುಮಾರ್ ಕೂಡ ಈ ಕುರಿತು ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಕತ್ತಲೆ ಭಾಗ್ಯದ ಕಾನೂನನ್ನು ನಮ್ಮ ಸರ್ಕಾರ ಬದಲಾಯಿಸಿದೆ. ಇದರಿಂದಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 5 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

— Sunil Kumar Karkala (Modi Ka Parivar) (@karkalasunil) July 2, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...