alex Certify ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಡಿಜಿ-ಐಜಿಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಡಿಜಿ-ಐಜಿಪಿ

ಬೆಂಗಳೂರು: ಇನ್ಮುಂದೆ ಪೊಲೀಸರು ವಾಹನ ಸವಾರರಿಗೆ ಅನಗತ್ಯ ಕಿರಿಕಿರಿಯಾಗುವಂತೆ ವಾಹನ ತಡೆಯುವಂತಿಲ್ಲ. ತುರ್ತಾಗಿ ತೆರಳುತ್ತಿರುವ ವಾಹನ ಸವಾರರನ್ನು ತಡೆದು ನಿಲ್ಲಿಸಿ ಇರಿಸುಮುರಿಸು ಉಂಟುಮಾಡುವಂತಿಲ್ಲ ಎಂದು ಡಿಜಿ-ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.

ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಮಾತ್ರವೇ ವಾಹನ ತಡೆಯಬೇಕು. ಇಲ್ಲವಾದಲ್ಲಿ ವಾಹನ ಸವಾರರನ್ನು ತಡೆಯುವಂತಿಲ್ಲ ಎಂದು ತಿಳಿಸಿದ್ದಾರೆ.

ಪೀಕ್ ಅವರ ಟ್ರಾಫಿಕ್ ಆರಂಭಕ್ಕೂ ಮುನ್ನವೇ ಸಂಚಾರಿ ಪೊಲೀಸರು ಆಯಾ ಸ್ಥಳಗಳಲ್ಲಿ ನಿಯೋಜನೆಗೊಂಡಿರಬೇಕು. ಸಂಚಾರ ದಟ್ಟಣೆ ಆರಂಭವಾಗುವ ಮೊದಲು ತಮ್ಮ ಸಮಯಕ್ಕೂ ಮುಂಚಿತವಾಗಿ ಸ್ಥಳದಲ್ಲಿದ್ದರೆ ಟ್ರಾಫಿಕ್ ಜಾಮ್, ಸಂಚಾರಿ ನಿಯಮ ಉಲ್ಲಂಘನೆ ತಡೆಗಟ್ಟಲು ಸಾಧ್ಯ.

ಸಂಚಾರಿ ಪೊಲೀಸರು ಸಾಧ್ಯವಾದಷ್ಟು ದೇಹಕ್ಕೆ ಧರಿಸುವ ಕ್ಯಾಮರಾ ಧರಿಸಬೇಕು. ಇದರಿಂದ ವಿವಾದ ಹಾಗೂ ಪ್ರಕರಣಗಳಲ್ಲಿ ಸ್ಪಷ್ಟ ಸಾಕ್ಷ್ಯ ಒದಗಿಸಲು ಸಹಾಯವಾಗಲಿದೆ. ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸುವ ವಾಹನಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...