alex Certify ವಿವಾಹಿತೆ ಮನೆಗೆ ನುಗ್ಗಿ ದಾಂಧಲೆ ನಡೆಸಿದ ವ್ಯಕ್ತಿ ವಿರುದ್ಧ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹಿತೆ ಮನೆಗೆ ನುಗ್ಗಿ ದಾಂಧಲೆ ನಡೆಸಿದ ವ್ಯಕ್ತಿ ವಿರುದ್ಧ ಕೇಸ್

ವಿವಾಹಿತ ಮಹಿಳೆಯನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದ ವ್ಯಕ್ತಿಯೊಬ್ಬ ಆಕೆಯ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಭದ್ರಾ ಕಾಲೋನಿಯಲ್ಲಿ ನಡೆದಿದೆ.

ಭದ್ರಾ ಕಾಲೋನಿಯಲ್ಲಿ ಈ ವಿವಾಹಿತ ಮಹಿಳೆ ವಾಸವಾಗಿದ್ದು, ಅದೇ ಕಾಲೋನಿಯಲ್ಲಿ ವಾಸವಾಗಿದ್ದ ಈ ವ್ಯಕ್ತಿ ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದುದ್ದಲ್ಲದೆ ಎಲ್ಲೇ ಹೋದರೂ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ಮಹಿಳೆ ತನ್ನ ಪತಿಯೊಂದಿಗೆ ಹೋಗುವಾಗ ಬೈಕ್ ಅಡ್ಡಗಟ್ಟಿ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದ್ದು ಈಗ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾನೆ. ಇದೀಗ ಮಹಿಳೆ ಆತನ ವಿರುದ್ಧ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...